ಭಾರತ ಮಾತೆಯ ಹೆಮ್ಮೆಯ ಪುತ್ರನಿಗೆ ನಮಿಸಲು ಬಂದಿರುವೆ: ಪ್ರಣಬ್ ಮುಖರ್ಜಿ

First Published Jun 7, 2018, 7:00 PM IST
Highlights

ಕಾಂಗ್ರೆಸ್‌ನ ಅತೀವ ವಿರೋಧದ ನಡೆಯುವೆಯೇ ನಾಗ್ಪುರದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಸ್ವಯಂ ಸಂಘ ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪಾಲ್ಗೊಂಡಿದ್ದು, ಸಂಘದ ಸಂಸ್ಥಾಪಕ ಡಾ.ಹೆಡ್ಗೆವಾರ್ ಅವರ ಹುಟ್ಟೂರಲ್ಲಿ 'ಭಾರತದ ಹೆಮ್ಮೆಯ ಪುತ್ರನಿಗೆ ನಮಿಸಲು ಬಂದಿರುವೆ...' ಎಂದು ಬರೆದಿದ್ದಾರೆ.

ನಾಗ್ಪುರ: ಕಾಂಗ್ರೆಸ್‌ನ ವಿರೋಧದ ನಡುವೆಯೇ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಸ್ವಯಂ ಸಂಘದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, 'ಭಾರತ ಮಾತೆಯ ಹೆಮ್ಮೆಯ ಪುತ್ರನಿಗೆ ನಮಿಸಲು ಬಂದಿರುವೆ,' ಎಂದು ಹೇಳಿದ್ದಾರೆ.

WATCH: Rashtriya Swayamsevak Sangh (RSS) flag being unfurled at RSS's Tritiya Varsh event, in Nagpur, where former President Dr Pranab Mukherjee is the chief guest. pic.twitter.com/A4zKtLiv4f

— ANI (@ANI)

ಡಾ.ಕೆ.ಬಿ.ಹೆಡಗೆವಾರ್ ಅವರ ಸ್ಮಾರಕ್ಕೆ ನಮಿಸಿದ ಪ್ರಣಬ್, ವಿಸಿಟರ್ಸ್ ಪುಸ್ತಕದಲ್ಲಿ ಅವರನ್ನು ಸ್ಮರಿಸಿದ್ದು 'ಭಾರತದ ಹೆಮ್ಮೆಯ ಪುತ್ರ' ಎಂದು. ಸಂಘದ ಸ್ವಯಂ ಸೇವಕರು ಪಥ ಸಂಚಲನದ ಮೂಲಕ ಪ್ರಣಬ್‌ಗೆ ಗೌರವ ಸಲ್ಲಿಸಿದರು.

Former President Dr Pranab Mukherjee at Rashtriya Swayamsevak Sangh's (RSS) Tritiya Varsh event, in Nagpur. pic.twitter.com/V0f2oHG8vA

— ANI (@ANI)

ಈ ಕಾರ್ಯಕ್ರಮಕ್ಕೆ ಸೈದ್ಧಾಂತಿಕವಾಗಿ ವಿಭಿನ್ನವಾಗಿರುವ ಕಾಂಗ್ರೆಸ್ ಮುಖಂಡ ಪ್ರಣಬ್ ಮುಖರ್ಜಿ ಅವರನ್ನು ಆಹ್ವಾನಿಸಿದಾಗ ಕಾಂಗ್ರೆಸ್ ಮುಖಂಡರು ಸೇರಿ, ಖುದ್ದು ಪ್ರಣಬ್ ಮಗಳು ಶರ್ಮಿಷ್ಠಾ ಸಹ ವಿರೋಧಿಸಿದ್ದರು. 'ಬಿಜೆಪಿ ಹಾಗೂ ಸಂಘದ ಸುಳ್ಳುಗಳನ್ನು ಸಮರ್ಥಿಸಲು ಪ್ರಣಬ್ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾರೆ,' ಎಂದು ಇವರ ನಡೆಯನ್ನು ವಿರೋಧಿಸಲಾಗಿತ್ತು.

ಸೋನಿಯಾಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಸಹ 'ಪ್ರಣಬ್ ಅವರಿಂದ ನಾವು ಇದನ್ನು ನಿರೀಕ್ಷಿಸಿರಲಿಲ್ಲ...'ಎಂದು ಹೇಳಿದ್ದರು.

Unke (Dr Pranab Mukherjee) prati bada aadar tha, shayad umar ki wajah se jaate jaate kuch galat baat kardun aisa laga hoga unko: Hussain Dalwai, Congress on Dr Pranab Mukherjee hailing KB Hedgewar as 'great son of Mother India' pic.twitter.com/YWCTWqaNNT

— ANI (@ANI)
click me!