ಮುಸ್ಲಿಂ ಜನಸಂಖ್ಯೆ ನಿಯಂತ್ರಿಸಿ: ಗುಡುಗಿದ ತೊಗಾಡಿಯಾ!

Published : Jul 04, 2018, 07:27 PM IST
ಮುಸ್ಲಿಂ ಜನಸಂಖ್ಯೆ ನಿಯಂತ್ರಿಸಿ: ಗುಡುಗಿದ ತೊಗಾಡಿಯಾ!

ಸಾರಾಂಶ

ಮುಸ್ಲಿಂ ಜನಸಂಖ್ಯೆ ನಿಯಂತ್ರಣಕ್ಕೆ ತೊಗಾಡಿಯಾ ಒತ್ತಾಯ ಮುಸ್ಲಿಮರ ಅಲ್ಪಸಂಖ್ಯಾತ ಮಾನ್ಯತೆ ರದ್ದತಿಗೆ ಆಗ್ರಹ ತೆರಿಗೆ ಹಣ ಎಲ್ಲ ಸಮುದಾಯದ ಅಭಿವೃದ್ಧಿಗೂ ಬಳಕೆಯಾಗಲಿ ಜೈಪುರ್‌ನಲ್ಲಿ ಮತ್ತೆ ಗುಡುಗಿದ ಪ್ರವೀಣ್ ತೊಗಾಡಿಯಾ

ಜೈಪುರ್(ಜು.4): ಮುಸ್ಲಿಮರ ಅಲ್ಪಸಂಖ್ಯಾತ ಮಾನ್ಯತೆಯನ್ನು ರದ್ದುಗೊಳಿಸಬೇಕು ಮತ್ತು ಅವರ ಜನಸಂಖ್ಯೆ ನಿಯಂತ್ರಿಸಲು ಎರಡು ಮಕ್ಕಳ ಮಿತಿ ಹೇರಬೇಕು ಎಂದು ವಿಶ್ವ ಹಿಂದೂ ಪರಿಷತ್ ಮಾಜಿ ನಾಯಕ ಪ್ರವೀಣ್ ತೊಗಾಡಿಯಾ ಒತ್ತಾಯಿಸಿದ್ದಾರೆ.

ಜೈಪುರದಲ್ಲಿ ಇಂದು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ತೊಗಾಡಿಯಾ, ಈ ಕೂಡಲೇ ಮುಸ್ಲಿಮರ ಅಲ್ಪಸಂಖ್ಯಾತ ಮಾನ್ಯತೆ ಹಿಂಪಡೆಯಬೇಕು ಮತ್ತು ಎರಡು ಮಕ್ಕಳ ನೀತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಜನರಿಂದ ಸಂಗ್ರಹಿಸಿದ ತೆರಿಗೆ ಹಣವನ್ನು ಮುಸ್ಲಿಮರಿಗಾಗಿ ಖರ್ಚು ಮಾಡಬಾರದು. ಅದರ ಬದಲು ಇತರೆ ಸಮುದಾಯದ ಬಡವರ ಕಲ್ಯಾಣಕ್ಕಾಗಿ ಖರ್ಚು ಮಾಡಲಿ ಎಂದು ಇತ್ತೀಚಿಗಷ್ಟೇ ಅಂತರಾಷ್ಟ್ರೀಯ ಹಿಂದೂ ಪರಿಷತ್ ಸ್ಥಾಪಿಸಿದ ತೊಗಾಡಿಯಾ ಹೇಳಿದ್ದಾರೆ.

ನಮ್ಮ ನೂತನ ಸಂಘಟನೆ ರಾಜಕೀಯದ ಮೇಲೆ ಪ್ರಭಾವ ಬೀರಲು ದೇಶದಲ್ಲಿ 20 ಕೋಟಿ ಹಿಂದೂಗಳ ಮತ ಬ್ಯಾಂಕ್ ಅನ್ನು ಸೃಷ್ಟಿಸಲಿದೆ ಎಂದು ತೊಗಾಡಿಯಾ ತಿಳಿಸಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಹಣದುಬ್ಬರ, ರೈತರ ಆತ್ಮಹತ್ಯೆ ತಡೆಯುವಲ್ಲಿ ಮತ್ತು ಉದ್ಯೋಗ ಸೃಷ್ಟಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!