6000 ಕ್ಯುಸೆಕ್‌ ಗಡುವಿಗೆ ನಾಳೆ ಕೊನೆ

Published : Oct 05, 2016, 03:19 PM ISTUpdated : Apr 11, 2018, 12:56 PM IST
6000 ಕ್ಯುಸೆಕ್‌ ಗಡುವಿಗೆ ನಾಳೆ ಕೊನೆ

ಸಾರಾಂಶ

ಮಂಡ್ಯ/ಮೈಸೂರು (ಸೆ.05): ಪ್ರತಿ ದಿನ 6 ಸಾವಿರ ಕ್ಯುಸೆಕ್‌ ನೀರನ್ನು ತಮಿಳುನಾಡಿಗೆ ಬಿಡಬೇಕು ಎನ್ನುವ ಸುಪ್ರೀಂ ಕೋರ್ಟ್‌ನ ತೀರ್ಪಿನ ಗಡುವು ನಾಳೆ ಕೊನೆಯಾಗಲಿದೆ. ಅ.7ರಿಂದ 18ರವರೆಗೆ ಕೇವಲ 2 ಸಾವಿರ ಕ್ಯುಸೆಕ್‌ ನೀರನ್ನು ತಮಿಳುನಾಡಿಗೆ ಬಿಡಬೇಕು.

ಕೃಷ್ಣರಾಜಸಾಗರ ಜಲಾಶಯದಿಂದ ತಮಿಳುನಾಡಿಗೆ ಬುಧವಾರ 5057 ಸಾವಿರ ಕ್ಯುಸೆಕ್‌ ನೀರನ್ನು ಬಿಡಲಾಗಿದೆ. ಕಳೆದ ಸೋಮವಾರ ರಾತ್ರಿಯೇ 4 ಸಾವಿರ ಕ್ಯುಸೆಕ್‌ ಬಿಡಲಾಗಿತ್ತು. ಮಂಗಳವಾರ ಬೆಳಗ್ಗೆ 1 ಸಾವಿರ ಕ್ಯುಸೆಕ್‌ ಅಧಿಕ ನೀರನ್ನು ಬಿಡಲಾಗಿದೆ. ಬುಧವಾರ ಸಂಜೆ ವೇಳೆಗೆ 8657 ಕ್ಯುಸೆಕ್‌ ನೀರನ್ನು ಜಲಾಶಯದಿಂದ ಬಿಡಲಾಗುತ್ತಿದೆ. ಇದರಲ್ಲಿ 3600 ಕ್ಯುಸೆಕ್‌ ನೀರು ಮಂಡ್ಯದ ವಿಸಿ ನಾಲೆ ಸೇರಿದಂತೆ ಇತರೆ ನಾಲೆಗಳಿಗೆ ಬಿಡಲಾಗುತ್ತಿದೆ. ಈ ನಡುವೆ ಒಳ ಹರಿವಿನ ಪ್ರಮಾಣ 3200 ಕ್ಯುಸೆಕ್‌ ಆಗಿದೆ.

ಸೋಮವಾರ ರಾತ್ರಿ 9 ಗಂಟೆ ವೇಳೆಗೆ ಕೃಷ್ಣರಾಜಸಾಗರದಲ್ಲಿ 15.07 ಟಿಎಂಸಿ ನೀರಿತ್ತು. ಬುಧವಾರ ಸಂಜೆ 7 ಗಂಟೆ ವೇಳೆಗೆ 14 ಟಿಎಂಸಿ ನೀರಿದೆ. ಈಗಾಗಲೇ ಸುಮಾರು 2 ಟಿಎಂಸಿ ನೀರು ಹರಿದು ಹೋಗಿದೆ. ಕಬಿನಿ ಜಲಾಶಯದಿಂದ 4000 ಕ್ಯುಸೆಕ್‌ ನೀರನ್ನು ನದಿಗೆ ಬಿಡಲಾಗಿದೆ.

ಹಾರಂಗಿ ಜಲಾಶಯದಿಂದ 400 ಕ್ಯುಸೆಕ್‌ ಮತ್ತು ಹೇಮಾವತಿ ಜಲಾಶಯದಿಂದ 3030 ಕ್ಯುಸೆಕ್‌ ನೀರನ್ನು ನದಿಗೆ ಹರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!