ಸಿದ್ದಾರ್ಥ್ ಮನೆ, ಕಂಪನಿಗಳ ಮೇಲೆ ಐಟಿ ದಾಳಿ ಮುಕ್ತಾಯ; ನಾಳೆ ಸಮನ್ಸ್ ಸಾಧ್ಯತೆ

Published : Sep 06, 2019, 12:43 PM IST
ಸಿದ್ದಾರ್ಥ್ ಮನೆ, ಕಂಪನಿಗಳ ಮೇಲೆ ಐಟಿ ದಾಳಿ ಮುಕ್ತಾಯ; ನಾಳೆ ಸಮನ್ಸ್ ಸಾಧ್ಯತೆ

ಸಾರಾಂಶ

ಎಸ್.ಎಂ.ಕೃಷ್ಣ ಅಳಿಯ ಸಿದ್ದಾರ್ಥ್ ಮನೆ, ಕಂಪನಿ ಮೇಲೆ ಐಟಿ ದಾಳಿ ಮುಕ್ತಾಯಗೊಂಡಿದೆ. ನಾಲ್ಕು ದಿನ ದಾಖಲೆ ಪರಿಶೀಲನೆ ನಡೆಸಿದ ಅಧಿಕಾರಿಗಳಿಗೆ ದಾಳಿ ವೇಳೆ ಅಪಾರ ಪ್ರಮಾಣದ ಆಸ್ತಿ ದಾಖಲೆಗಳು ಪತ್ತೆಯಾಗಿವೆ.

ಬೆಂಗಳೂರು (ಸೆ.24): ಎಸ್.ಎಂ.ಕೃಷ್ಣ ಅಳಿಯ ಸಿದ್ದಾರ್ಥ್ ಮನೆ, ಕಂಪನಿ ಮೇಲೆ ಐಟಿ ದಾಳಿ ಮುಕ್ತಾಯಗೊಂಡಿದೆ. ನಾಲ್ಕು ದಿನ ದಾಖಲೆ ಪರಿಶೀಲನೆ ನಡೆಸಿದ ಅಧಿಕಾರಿಗಳಿಗೆ ದಾಳಿ ವೇಳೆ ಅಪಾರ ಪ್ರಮಾಣದ ಆಸ್ತಿ ದಾಖಲೆಗಳು ಪತ್ತೆಯಾಗಿವೆ.

650 ಕೋಟಿ ಆದಾಯ ಘೋಷಿಸಿಕೊಂಡಿದ್ದ ಸಿದ್ದಾರ್ಥ್​ ಆದಾಯಕ್ಕೂ ಮೀರಿ ಅಧಿಕ ಪ್ರಮಾಣದ ಆಸ್ತಿ ಗಳಿಸಿರುವ ಬಗ್ಗೆ ಐಟಿ ಅಧಿಕಾರಿಗಳಿಗೆ ಮಾಹಿತಿ ಲಭ್ಯವಾಗಿದೆ. ಘೋಷಿತ ಆದಾಯ, ಅಘೋಷಿತ ಆದಾಯಕ್ಕೆ ಅಜಗಜಾಂತರ ವ್ಯತ್ಯಾಸ ಕಂಡುಬಂದಿದ್ದು ತೆರಿಗೆ ವಂಚನೆ ನಡೆದಿರುವುದು ದಾಖಲೆ ಪರಿಶೀಲನೆ ವೇಳೆ ಪತ್ತೆಯಾಗಿದೆ.

ನಿಯಮಗಳನ್ನ ಗಾಳಿಗೆ ತೂರಿ ಹಣ ವರ್ಗಾವಣೆ ಮಾಡಿರುವ ಸಿದ್ದಾರ್ಥ್​ ಒಡೆತನದ ಕಂಪನಿಗಳನ್ನು ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ. ನಾಳೆ ಐಟಿ ಅಧಿಕಾರಿಗಳಿಂದ ಸಮನ್ಸ್​ ಜಾರಿಯಾಗುವ ಸಾಧ್ಯತೆ ಇದೆ.  ನಾಳೆ ಇಡಿ ಅಧಿಕಾರಿಗಳಿಂದ ತನಿಖೆ ನಡೆಸುವ ಸಾಧ್ಯತೆ ಇದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು