
ಬೆಂಗಳೂರು(ನ.25): ರಾಜ್ಯದ ಎಲ್ಲ ಶಾಲೆಗಳಲ್ಲಿ ನ.26ರಂದು ‘ಸಂವಿಧಾನ ದಿನ’ವನ್ನಾಗಿ ಆಚರಣೆ ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಈ ದಿನದ ಅಂಗವಾಗಿ ಸಂವಿಧಾನದ ಪ್ರಸ್ತಾವವನ್ನು ಶಾಲಾ ಪ್ರಾರ್ಥನಾ ಸಮಯದಲ್ಲಿ ಜೋರಾಗಿ ಓದಬೇಕು, ಪ್ರಮುಖ ಲಕ್ಷಣಗಳ ಬಗ್ಗೆ ತಿಳಿಸುವುದು, ಪ್ರಬಂಧ, ರಸಪ್ರಶ್ನೆ ಹಾಗೂ ‘ನನ್ನ ದೈನಂದಿನ ಜೀವನದಲ್ಲಿ ನನ್ನ ಸಂವಿಧಾನ’ ಎಂಬ ವಿಷಯ ಕುರಿತು ಚಿತ್ರಕಲಾ ಸ್ಪರ್ಧೆ ಏರ್ಪಡಿಸುವಂತೆ ಸೂಚನೆ ನೀಡಿದೆ. ಕಾರ್ಯಕ್ರಮ ನಡೆಸಿದ ಬಳಿಕ ಸುದ್ದಿ ಮತ್ತು ಛಾಯಾಚಿತ್ರಗಳನ್ನು ದಾಖಲೀಕರಿಸಿ ವರದಿ ನೀಡುವಂತೆ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.