
ಬೆಂಗಳೂರು(ನ.30): ಜಮ್ಮು-ಕಾಶ್ಮೀರದ ನಗ್ರೋಟಾ ಉಗ್ರರದಾಳಿಯಲ್ಲಿ ನಿನ್ನೆ ಹುತಾತ್ಮರಾದ ಕನ್ನಡಿಗ ಮೇಜರ್ ಅಕ್ಷಯ್ ಗಿರೀಶ್ ಕುಮಾರ್ ಅವರ ಪಾರ್ಥಿವ ಶರೀರ ಇಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿಗೆ ತಲುಪಲಿದೆ.
ಯಲಹಂಕದಲ್ಲಿರುವ ಏರ್'ಫೋರ್ಸ್'ಗೆ ಪಾರ್ಥಿವ ಶರೀರ ತಲುಪಲಿದ್ದು, ಬೆಳಗ್ಗೆ 11.30 ರಿಂದ 12.30ರವರೆಗೆ ಮಿಲಿಟರಿಯಿಂದ ಗೌರವ ಸಲ್ಲಿಕೆ ನಡೆಯಲಿದೆ. ಮಧ್ಯಾಹ್ನ 12.30ರ ಬಳಿಕ ಪಾರ್ಥೀವ ಶರೀರ ಯಲಹಂಕದ ಗೇಟ್ ಗಾರ್ಡ್'ನ್ ತೆಗೆದುಕೊಂಡು ಹೋಗಲಾಗುತ್ತದೆ. ಮಧ್ಯಾಹ್ನ 2 ಗಂಟೆಯಿಂದ 4 ಗಂಟೆಯವರೆಗೂ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುವುದು. ತದ ನಂತರ ಹೆಬ್ಬಾಳದ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.