ನಾಳೆ ಮಧ್ಯಪ್ರದೇಶ ಸಿಎಂ ವಿಜಯಪುರಕ್ಕೆ

By Suvarna Web DeskFirst Published Aug 15, 2017, 12:25 AM IST
Highlights

ಮಧ್ಯಪ್ರದೇಶದಿಂದ ಬೆಳಗಾವಿ ಮಾರ್ಗವಾಗಿ ಬೆಳಗ್ಗೆ 10.10ಕ್ಕೆ ವಿಜಯಪುರಕ್ಕೆ ಆಗಮಿಸಲಿರುವ ಅವರು, 10.25ಕ್ಕೆ ನಗರದ ಬಿಎಲ್‌ಇಡಿ ಕಾಲೇಜು ಆವರಣದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ವಿಜಯಪುರ(ಆ.15): ಬರಮುಕ್ತ ಭಾರತಕ್ಕಾಗಿ ರಾಷ್ಟ್ರೀಯ ಜಲ ಸಮಾವೇಶದಲ್ಲಿ ಪಾಲ್ಗೊಳ್ಳಲು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ಸಿಂಗ್‌ ಚೌವ್ಹಾಣ್ ಅವರು ಬುಧವಾರ ವಿಜಯಪುರಕ್ಕೆ ಭೇಟಿ ನೀಡಲಿದ್ದಾರೆ.

ಮಧ್ಯಪ್ರದೇಶದಿಂದ ಬೆಳಗಾವಿ ಮಾರ್ಗವಾಗಿ ಬೆಳಗ್ಗೆ 10.10ಕ್ಕೆ ವಿಜಯಪುರಕ್ಕೆ ಆಗಮಿಸಲಿರುವ ಅವರು, 10.25ಕ್ಕೆ ನಗರದ ಬಿಎಲ್‌ಇಡಿ ಕಾಲೇಜು ಆವರಣದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮ ಮುಗಿದ ಬಳಿಕ ಮಧ್ಯಾಹ್ನ 1.10ಕ್ಕೆ ವಿಜಯಪುರ ಹೆಲಿಪ್ಯಾಡ್‌ನಿಂದ ಭೋಪಾಲ್‌ಗೆ ಪ್ರಯಾಣ ಬೆಳೆಸಲಿದ್ದಾರೆ.

click me!