
ಬೆಂಗಳೂರು (ಡಿ.08): ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ಕೊಟ್ಟ ರವಿ ಬೆಳಗೆರೆಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲು ಸಿಸಿಬಿ ಪೊಲೀಸರು ಕರೆ ತಂದಿದ್ದಾರೆ. ರವಿ ಬೆಳೆಗೆರೆಗೆ ರಾತ್ರಿ ವಾಸ್ತವ್ಯಕ್ಕೆ ಸಿಸಿಬಿಯಲ್ಲೇ ವ್ಯವಸ್ಥೆ ಮಾಡಲಾಗಿದೆ.
ರವಿ ಬೆಳಗೆರೆ ಆರೋಗ್ಯ ಪರೀಕ್ಷೆಗೆ ಸಿಸಿಬಿ ವೈದ್ಯರನ್ನು ಕರೆತರುವ ಸಾಧ್ಯತೆಯಿದ್ದು ವೈದ್ಯಕೀಯ ಪರೀಕ್ಷೆಯ ನಂತರ ವಿಚಾರಣೆ ನಡೆಸಲಿದೆ. ಬೆಳೆಗೆರೆಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಪೊಲೀಸರು ಬೆಡ್ ವ್ಯವಸ್ಥೆಯನ್ನೂ ಮಾಡಿದ್ದಾರೆ.
ನಾಳೆ 2 ನೇ ಶನಿವಾರವಾದ್ದರಿಂದ ಕೋರ್ಟ್ ಕಲಾಪ ಇರುವುದಿಲ್ಲ. ನಾಳೆ ಬೆಳಗ್ಗೆ ನ್ಯಾಯಾಧೀಶರ ಮನೆಗೆ ಹಾಜರುಪಡಿಸುವ ಸಾಧ್ಯತೆಯಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.