
ನವದೆಹಲಿ(ಜೂನ್.9): ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪೊಲೀಸರು ಭೀಕರ ಎನ್ಕೌಂಟರ್ ಮಾಡಿದ್ದು, ಘಟನೆಯಲ್ಲಿ ಶಂಕಿತ 4 ಮಂದಿ ಭೂಗತ ಪಾತಕಿಗಳು ಹತರಾಗಿದ್ದಾರೆ.
ದಕ್ಷಿಣ ದೆಹಲಿಯ ಚತಾರಪುರ್ ಪ್ರದೇಶದಲ್ಲಿ ದೆಹಲಿ ಪೊಲೀಸ್ ವಿಶೇಷ ಘಟಕದ ಸಿಬ್ಬಂದಿ ಈ ಎನ್ಕೌಂಟರ್ ಮಾಡಿದ್ದು, ಈ ವೇಳೆ ನಾಲ್ಕು ಮಂದಿ ಶಂಕಿತ ಭೂಗತ ಪಾತಕಿಗಳು ಹತರಾಗಿದ್ದಾರೆ. ಅಂತೆಯೇ ಮೂವರು ಪೊಲೀಸರಿಗೂ ಘಟನೆಯಲ್ಲಿ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಇನ್ನು ಪೊಲೀಸ್ ಎನ್ ಕೌಂಟರ್ ನಲ್ಲಿ ಹತರಾದ ಶಂಕಿತರು ಭೂಗತ ಪಾತಕಿ ರಾಜೇಶ್ ಭಾರ್ತಿ ಗ್ಯಾಂಗ್ನವರು ಎಂದು ಶಂಕಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ದೆಹಲಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಪ್ರಸ್ತುತ ಹತರಾದ ಶಂಕಿತ ಪಾತಗಳ ಮೇಲೆ ಪೊಲೀಸ್ ಇಲಾಖೆ ನಗದು ಬಹುಮಾನ ಘೋಷಣೆ ಮಾಡಿತ್ತು. ಇನ್ನು ಭೂಗತ ಪಾತಕಿ ರಾಜೇಶ್ ಭಾರ್ತಿ ವಿರುದ್ಧ ಕೊಲೆ, ಸುಲಿಗೆ, ಬೆದರಿಕೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.