ರೈಲ್ವೇ ಇಲಾಖೆಯ ಹಿರಿಯ ಅಧಿಕಾರಿಯಿಂದ ಕಿರುಕುಳ ಆರೋಪ: ಮಹಿಳಾ ಅಧಿಕಾರಿಯಿಂದ ಹೋರಾಟ

Published : Sep 25, 2016, 11:10 AM ISTUpdated : Apr 11, 2018, 01:00 PM IST
ರೈಲ್ವೇ ಇಲಾಖೆಯ ಹಿರಿಯ ಅಧಿಕಾರಿಯಿಂದ ಕಿರುಕುಳ ಆರೋಪ:  ಮಹಿಳಾ ಅಧಿಕಾರಿಯಿಂದ ಹೋರಾಟ

ಸಾರಾಂಶ

ಹಾಸನ(ಸೆ.25): ರೈಲ್ವೆ ಇಲಾಖೆ ಅಂದ್ರೆ ಅದು ಶಿಸ್ತಿಗೆ ಹೆಸರಾದ ಇಲಾಖೆ ಎನ್ನುವ ಮಾತಿದೆ. ಆದರೆ ಈ ಇಲಾಖೆಯಲ್ಲೂ ಲೈಂಗಿಕ ಕಿರುಕುಳ ಹಾಗೂ ಕಳ್ಳತನದಂತಹ ಸುಳ್ಳು ಆರೋಪ ಹೊರಿಸಿ ತೇಜೋವಧೆ ಮಾಡಿರುವ ಆರೋಪ ಹಾಸನ ಜಿಲ್ಲೆ ಅರಸಿಕೆರೆ  ರೈಲ್ವೆ ಜಂಕ್ಷನ್'ನಲ್ಲಿ ಕೇಳಿಬಂದಿದೆ.

ರೈಲ್ವೆ ಇಲಾಖೆ ಮಹಿಳಾ ಅಧಿಕಾರಿಯೊಬ್ಬರು ಮೇಲಧಿಕಾರಿಗಳ ಕಿರುಕುಳದ ವಿರುದ್ದ ತಿರುಗಿಬಿದ್ದು ಹೋರಾಟಕ್ಕೆ ಮುಂದಾಗಿದ್ದಾರೆ. ಮಹಿಳಾ ಅಧಿಕಾರಿಗೆ ಲೈಂಗಿಕ ಕಿರುಕುಳ ಮಾತ್ರವಲ್ಲದೇ ಆಕೆ 10 ಲಕ್ಷ ರೂ ದುರುಪಯೋಗ​ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿ ದಿಢೀರ್​ ವರ್ಗಾವಣೆ ಮಾಡಿದ ಘಟನೆ ಅರಸೀಕೆರೆ ರೈಲ್ವೆ ಜಂಕ್ಷನ್'ನಲ್ಲಿ ಕೇಳಿ ಬಂದಿದೆ. ಕಮರ್ಷಿಯಲ್ ಸೂಪರ್ ವೈಸರ್ ಆಗಿರುವ ಸುಮಲತಾ ಎಂಬುವರೇ ದಂಡನೆಗೆ ಗುರಿಯಾಗಿರುವ ಮಹಿಳಾ ಅಧಿಕಾರಿ. ಇದೀಗ ಈಕೆ ನ್ಯಾಯ ಬೇಕೆಂದು ರೈಲ್ವೆ ಇಲಾಖೆ ಎದುರು ಒಂಟಿಯಾಗಿ ಹೋರಾಟ ನಡೆಸುತ್ತಿದ್ದಾರೆ.

ಅದೇ ಇಲಾಖೆಯ ಮೇಲಾಧಿಕಾರಿಯಾಗಿದ್ದ ಧನಶೇಖರ್ ಎಂಬಾತ ಕಳೆದ 2 ವರ್ಷಗಳ ಹಿಂದೆ ಸುಮಲತಾಗೆ ಲೈಂಗಿಕ ಕಿರುಕುಳ ಜೊತೆಗೆ ಮಾನಸಿಕ ಹಿಂಸೆ ನೀಡಿದ್ದ ಎನ್ನಲಾಗಿದೆ. ಅಲ್ಲದೇ ನಾನು ಹೇಳಿದ ಮೇಲಾಧಿಕಾರಿಗಳಿಗೆ ನೀನು ಎಲ್ಲಾ ರೀತಿಯ ಸಹಕಾರ ನೀಡಿದ್ರೆ ಬಡ್ತಿ ಸೇರಿದಂತೆ ನಿನಗೆ ಬೇಕಾದ ಸೌಲಭ್ಯ ನೀಡುವೆ. ಇಲ್ಲವಾದರೆ ನಿನ್ನನ್ನು ಬೇರೆ ಕಡೆಗೆ ವರ್ಗ ಮಾಡುವುದಾಗಿ ಬೆದರಿಕೆ ಹಾಕಿದ್ದ ಎನ್ನುವುದು ಸುಮಲತಾ ಆರೋಪ. ಸುಮಲತಾ, ಸ್ಥಳೀಯ ಪೊಲೀಸರಿಗೆ ಧನಶೇಖರ್ ವಿರುದ್ಧ ಒಂದು ವರ್ಷದ ಹಿಂದೆಯೇ ಲೈಂಗಿಕ ಕಿರುಕುಳದ ದೂರು ಸಹ ನೀಡಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು
ನೆತನ್ಯಾಹು ಪ್ರಧಾನಿ ಮೋದಿಗೆ ಕರೆ ಮಾಡಿ ಮಾತುಕತೆ: ಭಯೋತ್ಪಾದನೆ ವಿರುದ್ಧ ದೊಡ್ಡ ನಿರ್ಧಾರ!