
ಚಿಕ್ಕಮಗಳೂರು (ಸೆ.21) : ರಾಜೀನಾಮೆ ನೀಡುವರ 17 ಶಾಸಕರ ವಿಧಾನಸಭಾ ಕ್ಷೇತ್ರಗಳ ಪೈಕಿ ಇದೀಗ ಬೆಂಗಳೂರಿನ ಆರ್ಆರ್ ನಗರ ಹಾಗೂ ಹಾವೇರಿ ಜಿಲ್ಲೆಯ ರಾಣಿಬೆನ್ನೊರು ಕ್ಷೇತ್ರಗಳನ್ನು ಹೊರತುಪಡಿಸಿ, 15 ಕೇತ್ರಗಳಿಗೆ ಚುನಾವಣಾ ದಿನಾಂಕ ಪ್ರಕಟವಾಗಿದೆ. ಅದರಿನ್ನೂ ಅನರ್ಹ ಶಾಸಕರ ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟಿನಲ್ಲಿ ಬಾಕಿ ಇರುವುದರಿಂದ ಉಪ ಚುನಾವಣೆ ನಡೆಯುವುದೇ ಅನುಮಾನವೆಂದು ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಹೇಳಿದ್ದಾರೆ.
ಸುಪ್ರೀಂ ಕೋರ್ಟಿನ ತೀರ್ಪಿನ ಮೇಲೆ ಉಪ ಚುನಾವಣೆ ನಿಂತಿದೆ. ಉಪ ಚುನಾವಣೆಯ ಮೇಲೆ ಸುಪ್ರೀಂ ಕೋರ್ಟ್ ತೀರ್ಪು ಪರಿಣಾಮ ಬೀರುತ್ತದೆ, ಎಂದಿದ್ದಾರೆ ರವಿ. ಚುನಾವಣಾ ಆಯೋಗ ಉಪ ಚುನಾವಣೆ ಘೋಷಿಸಿದೆ.
ಆದ್ರೆ ಉಪ ಚುನಾವಣೆಗೆ ಕೆಲವು ತಾಂತ್ರಿಕ ತೊಡಕುಗಳಿವೆ. ಹಿಂದಿನ ಸಭಾಧ್ಯಕ್ಷ ರಮೇಶ್ ಕುಮಾರ್ ಅವರ ಆದೇಶದ ಮೇಲೆ ಅನರ್ಹ ಶಾಸಕರು ಸುಪ್ರೀಂ ಕೋರ್ಟ್ಗೆ ಹೋಗಿದ್ದಾರೆ. ಅನರ್ಹ ಶಾಸಕರ ಅರ್ಜಿ ವಿಚಾರಣೆ ಇನ್ನೂ ಸುಪ್ರೀಂ ಕೋರ್ಟಿನಲ್ಲಿ ಬಾಕಿ ಇದೆ. ಈ ಸಮಯದಲ್ಲಿ ಸುಪ್ರೀಂ ನೀಡುವ ತೀರ್ಪಿನ ಮೇಲೆ ಈ ಚುನಾವಣೆಗಳು ನಡೆಯತ್ತೋ ಇಲ್ಲವೋ? ನಡೆದರೆ ಯಾವಾಗ ಎನ್ನುವುದರ ಬಗ್ಗೆ ನಿರ್ಧಾರವಾಗಲಿದೆ. ಬಿಜೆಪಿ ಚುನಾವಣೆಗೆ ಸದಾ ಸಿದ್ಧ.
ಈ ಉಪಚುನಾವಣೆಗಳಿಗೆ ಮಾತ್ರವಲ್ಲ, ಸಂಘಟನೆಯ ಎಲ್ಲಾ ಹಂತದಲ್ಲೂ ತಯಾರಿ ನಡೆದಿರುತ್ತದೆ, ಎಂದು ರವಿ ಹೇಳಿದ್ದಾರೆ.
ಉಪ ಚುನಾವಣೆಗೆ ಮೈತ್ರಿ ಇಲ್ಲ: ಕುಮಾರಸ್ವಾಮಿ
ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 21ರಂದು ಚುನಾವಣೆ ನಡೆಯಲಿದ್ದು, ಅ.24ಕ್ಕೆ ಮತ ಣಿಕೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.