
ಬೆಂಗಳೂರು (ಏ.20): ಹಂಪಿ ವಿರೂಪಾಕ್ಷ ದೇವಾಲಯದ ಪ್ರಾಂಗಣದ ಒಳಗೆ ವಿದೇಶಿ ಪ್ರವಾಸಿಗರು ಮಧ್ಯದ ಬಾಟಲನ್ನು ತೆಗೆದುಕೊಂಡು ಹೋಗಿ ಸೇವಿಸಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ವಿರೂಪಾಕ್ಷ ದೇವಾಲಯದ ಪ್ರಾಂಗಣದ ಒಳಗೆ ಮಧ್ಯವನ್ನು ನಿಷೇಧಿಸಲಾಗಿದೆ. ವಿದೇಶೀ ಪ್ರವಾಸಿಗನೊಬ್ಬ ಮದ್ಯವನ್ನು ತೆಗೆದುಕೊಂಡು ಹೋಗುತ್ತಿರುವ ಚಿತ್ರ ವೈರಲ್ ಆಗಿದ್ದು, ದೇವಸ್ಥಾನದ ಒಳಭಾಗದಲ್ಲಿ ಭದ್ರತೆಯನ್ನು ಇನ್ನಷ್ಟು ಹೆಚ್ಚಿಸಬೇಕೆಂದು ಒತ್ತಾಯಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಅವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ವಿದೇಶಿ ಪ್ರವಾಸಿಗ ಅಪರಿಚಿತನಾಗಿದ್ದು, ಹೋಲಂಡ್ ನವನು ಎಂದು ತಿಳಿದು ಬಂದಿದೆ. ಮೊದಲ ಬಾರಿಗೆ ಮದ್ಯದ ಬಾಟಲ್ ತಂದಾಗ ಎಚ್ಚರಿಕೆ ನೀಡಿ ವಾಪಸ್ ಕಳುಹಿಸಲಾಗಿತ್ತು. ಎರಡನೇ ಬಾರಿಗೆ ಕದ್ದುಮುಚ್ಚಿ ತಂದಿದ್ದ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.