
ಗುವಾಹಟಿ(ಜು.19): ಅನಿರೀಕ್ಷಿತ ರಾಜಕೀಯ ಬೆಳವಣಿಗೆಯಲ್ಲಿ ಶುರ್ಹೋಲ್ಜೀ ಲೈಝೆಟ್ಸು ರಾಜೀನಾಮೆ ನೀಡಿದ್ದು, ನೂತನ ಮುಖ್ಯಮಂತ್ರಿಯಾಗಿ ಟಿ.ಆರ್. ಝೆಲಿಯಾಂಗ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕಳೆದ 5 ತಿಂಗಳಲ್ಲಿ ಝೆಲಿಯಾಂಗ್ ಅವರಿಗೆ ರಾಜ್ಯಪಾಲ ಪಿ.ಬಿ. ಆಚಾರ್ಯ ಅವರು ರಾಜಭವನದಲ್ಲಿ 2ನೇ ಬಾರಿಗೆ ಪ್ರಮಾಣ ವಚನ ಭೋದಿಸಿದರು.
ಕಳೆದ ಫೆಬ್ರವರಿಯಲ್ಲಿ ನಗರಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ಆದೇಶ ಪ್ರಕಟಿಸಿದ ಕಾರಣ ಬುಡಕಟ್ಟು ಗುಂಪುಗಳು ಪ್ರತಿಭಟನೆ ನಡೆಸಿದ ಪರಿಣಾಮ ಪಕ್ಷದ ಅಧ್ಯಕ್ಷ ಮಾಜಿ ಶುರ್ಹೋಲ್ಜೀ ಲೈಝೆಟ್ಸು ಝೆಲಿಯಾಂಗ್ ಅವರನ್ನು ಸಿಎಂ ಹುದ್ದೆ ಸ್ಥಾನದಿಂದ ಕೆಳಗಿಳಿಸಿ ತಾವೇ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದರು. ಕೆಲವು ದಿನಗಳಿಂದ ನಡೆಯುತ್ತಿರುವ ಶಾಸಕರ ರೆಸಾರ್ಟ್ ರಾಜಕೀಯದ ಪರಿಣಾಮ ಝೆಲಿಯಾಂಗ್ ಪುನಃ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.