
ಮಂಗಳೂರು [ಜು.31]: ಸೇತುವೆಯಿಂದ ನದಿಗೆ ಜಿಗಿದು ಮಾಜಿ ಸಿಎಂ ಅಳಿಯ ನೀರು ಪಾಲಾಗಿದ್ದಾರೆ ಎಂಬ ಸುದ್ದಿ ಹರಡಿದ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ ನೇತ್ರಾವತಿ ಸೇತುವೆ ಮೇಲೆ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು.
ಮಂಗಳವಾರ ಬೆಳಗ್ಗೆ 7 ಗಂಟೆಯಿಂದ ಶೋಧ ಕಾರ್ಯಾಚರಣೆ ಆರಂಭಗೊಂಡಾಗ, ಕುತೂಹಲಗೊಂಡ ನಾಗರಿಕರು ಸೇತುವೆಯ ಇಕ್ಕೆಲಗಳಲ್ಲಿ ಜಮಾಯಿಸಿದರು.
ಡಾ| ರಾಜ್ ಬಿಡುಗಡೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಉದ್ಯಮಿ ಸಿದ್ಧಾರ್ಥ್ !
ಘಟನಾ ಸ್ಥಳದಲ್ಲಿ ಪೊಲೀಸ್ ಭದ್ರತೆ ಹಾಕಲಾಗಿತ್ತು. ನೇತ್ರಾವತಿ ಸೇತುವೆಯು ರಾಷ್ಟ್ರೀಯ ಹೆದ್ದಾರಿ 66, ಮಂಗಳೂರು-ಕೇರಳವನ್ನು ಸಂಪರ್ಕಿಸುವ ಹೆದ್ದಾರಿಯಾಗಿದೆ. ಆದ್ದರಿಂದ ಈ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಸಾಮಾನ್ಯ. ಸೇತುವೆ ಕೆಳಭಾಗದಲ್ಲಿ ನದಿಯಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದ್ದುದರಿಂದ ಜನಸಮೂಹ ಸೇರಿದ ಪರಿಣಾಮ ಸುಮಾರು ಒಂದೂವರೆ ಗಂಟೆ ಕಾಲ ಟ್ರಾಫಿಕ್ ಜಾಮ್ ಉಂಟಾಯಿತು.
ಬಳಿಕ ಪೊಲೀಸರು ಹರಸಾಹಸಪಟ್ಟು ಜನತೆಯನ್ನು ಚದುರಿಸಿ ಸುಗಮ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.