ಕರ್ಮವೇ ಧರ್ಮ: ಮಳೆಗೆ ಎದೆಯೊಡ್ಡಿ ಕರ್ತವ್ಯದ ಗೌರವ ಹೆಚ್ಚಿಸಿದ ಪೇದೆ!

Published : Apr 01, 2019, 12:39 PM IST
ಕರ್ಮವೇ ಧರ್ಮ: ಮಳೆಗೆ ಎದೆಯೊಡ್ಡಿ ಕರ್ತವ್ಯದ ಗೌರವ ಹೆಚ್ಚಿಸಿದ ಪೇದೆ!

ಸಾರಾಂಶ

ಭಾರೀ ಮಳೆಯಲ್ಲೂ ಕರ್ತವ್ಯಪ್ರಜ್ಞೆ ಮೆರೆದ ಟ್ರಾಫಿಕ್ ಪೇದೆ| ಮಳೆಯಲ್ಲೇ ಸುಗಮ ಸಂಚಾರದ ಜವಾಬ್ದಾರಿ ಹೊತ್ತ ಪೇದೆ| ಅಸ್ಸಾಂ ರಾಜಧಾನಿ ಗುವಹಾಟಿ ಟ್ರಾಫಿಕ್ ಪೇದೆ ಮಿಥುನ್ ದಾಸ್| ಮಳೆಗೆ ಎದೆಯೊಡ್ಡಿ ನಿಂತಿರುವ ಮಿಥುನ್ ದಾಸ್ ವಿಡಿಯೋ ವೈರಲ್| ಅಸ್ಸಾಂ ಪೊಲೀಸರ ಗರ್ವ ಹೆಚ್ಚಿಸಿದ ಮಿಥುನ್ ದಾಸ್ ಕರ್ತವ್ಯಪ್ರಜ್ಞೆ|

ಗುವಹಾಟಿ(ಏ.01): ಕರ್ಮಣ್ಯೇವಾಧಿಕಾರಸ್ಥೆ ಮಾ ಫಲೇಷು ಕದಾಚನ...ಗೀತೆಯ ಈ ಸಾರ ಅರ್ಥವಾದವ ಕರ್ತವ್ಯದಲ್ಲಿರುತ್ತಾನೆ. ಅರ್ಥವಾಗದವನಿಗೆ ಆತ ಆದರ್ಶನಾಗಿರುತ್ತಾನೆ.

ಕಾಯಕವೇ ಕೈಲಾಸ ಎಂದರೇನು ಬಲ್ಲವನಿಗೆ ಮಾತ್ರ ಕರ್ತವ್ಯದ ಅರಿವಿರುತ್ತದೆ. ಇದು ಸಮಾಜದ ಪ್ರತಿಯೊಬ್ಬರಿಗೂ ಅನ್ವಯಿಸುವ ಗುಣ. ಇದರಲ್ಲಿ ಮುಂಚೂಣಿಯಲ್ಲಿ ಕಾಣ ಸಿಗುವವರು ಸೈನಿಕರು ಮತ್ತು ಪೊಲೀಸರು.

ಅದರಂತೆ ಅಸ್ಸಾಂ ರಾಜಧಾನಿ ಗುವಹಾಟಿಯಲ್ಲಿ ಭಾರೀ ಮಳೆಯ ನಡುವೆಯೂ ತನ್ನ ಕರ್ತವ್ಯ ನಿರ್ವಹಿಸುವ ಮೂಲಕ, ಟ್ರಾಫಿಕ್ ಪೇದೆಯೋರ್ವ ಮತ್ತೆ ಅದೇ ಸಂದೇಶವನ್ನು ಸಾರಿದ್ದಾನೆ. 'Duty First'

ಗುವಹಾಟಿಯಲ್ಲಿ ಭಾರೀ ಮಳೆಯ ನಡುವೆಯೂ ಸುಗಮ ಸಂಚಾರ ವ್ಯವಸ್ಥೆಯ ಜವಾಬ್ದಾರಿ ಹೊತ್ತ ಪೇದೆಯೋರ್ವ ಕರ್ತವ್ಯದಲ್ಲಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಕಾರು ಚಾಲಕನೋರ್ವ ಪೇದೆ ಮಳೆಯ ನಡುವೆಯೇ ಕರ್ತವ್ಯ ನರ್ವಹಿಸುತ್ತಿರುವ ವಿಡಿಯೋ ಮಾಡಿದ್ದು, ಆತನ ಕರ್ತವ್ಯಪ್ರಜ್ಞೆ ಎಲ್ಲರಿಂದ ಮೆಚ್ಚುಗೆಗೆ ಪಾತ್ರವಾಗಿದೆ.

ಇನ್ನು ಈ ವಿಡಿಯೋವನ್ನು ಅಸ್ಸಾಂ ಪೊಲೀಸ್ ಕೂಡ ತನ್ನ ಅಧಿಕೃತ ಟ್ವಿಟ್ಟರ್‌ನಲ್ಲಿ ಶೇರ್ ಮಾಡಿದ್ದು, ಮಳೆಯಲ್ಲಿ ಕರ್ತವ್ಯ ನಿರ್ವಹಿಸಿದ ಪೇದೆ ಮಿಥುನ್ ದಾಸ್ ಅಸ್ಸಾಂ ಪೊಲೀಸರ ಹೆಮ್ಮೆಯ ಪ್ರತಿನಿಧಿ ಎಂದು ಹೇಳಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

TTP Attack; ಪ್ರಾರ್ಥನೆ ವೇಳೆ ಭೀಕರ ಉಗ್ರರ ದಾಳಿ; ಕನಿಷ್ಠ 27 ಸಾವು, ಗಡಿಯಲ್ಲಿ ಹೈ ಅಲರ್ಟ್ ಘೋಷಣೆ!
ಇನ್ಮುಂದೆ ಮೊಬೈಲ್‌ ನಂಬರ್‌ ರೀತಿ ಫಾಸ್ಟ್‌ಟ್ಯಾಗ್‌ ಕೂಡ ಪೋರ್ಟ್‌ ಮಾಡಬಹುದು, OneTag ಅನಾವರಣ ಮಾಡಿದ NHAI