ಟ್ರಾಫಿಕ್ ಜಾಮ್ ನಿಯಂತ್ರಣಕ್ಕೆ ರಸ್ತೆ ಗುಂಡಿ ಮುಚ್ಚಿದ ಪೇದೆ..!

Published : Aug 31, 2018, 01:28 PM ISTUpdated : Sep 09, 2018, 09:01 PM IST
ಟ್ರಾಫಿಕ್ ಜಾಮ್ ನಿಯಂತ್ರಣಕ್ಕೆ ರಸ್ತೆ ಗುಂಡಿ ಮುಚ್ಚಿದ ಪೇದೆ..!

ಸಾರಾಂಶ

ರಸ್ತೆಯಲ್ಲಿ ಉಂಟಾಗುತ್ತಿದ್ದ ಭಾರೀ ಟ್ರಾಫಿಕ್ ಜಾಮ್ ನಿಯಂತ್ರಣಕ್ಕೆ ಸ್ವತಃ ಟ್ರಾಫಿಕ್ ಪೇದೆಯೇ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯಕ್ಕೆ ಇಳಿದಿದ್ದಾರೆ. ಅವರ ಕಾರ್ಯಕ್ಕೆ ಸಾರ್ವಜನಿಕರಿಂದ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. 

ಬೆಂಗಳೂರು :  ಟ್ರಾಫಿಕ್ ಜಾಮ್ ನಿಯಂತ್ರಣಕ್ಕೆ  ಸ್ವತಃ ಟ್ರಾಫಿಕ್ ಪೇದೆಯೇ ರಸ್ತೆ ಗುಂಡಿ ಮುಚ್ಚುವ ಕಾರ್ಯ ಮಾಡಿದ್ದಾರೆ.  ಅಶೋಕ್ ನಗರ ಟ್ರಾಫಿಕ್ ಹೆಡ್ ಕಾನ್ಸ್ ಟೇಬಲ್  ಆಗಿರುವ ಸುರೇಶ್ ರಸ್ತೆ ಗುಂಡಿ ಮುಚ್ಚುವ ಮೂಲಕ ಸುದ್ದಿಯಾಗಿದ್ದಾರೆ.  

ಕಳೆದ ವಾರ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ವಿವೇಕ್ ನಗರದ 1ನೇ ಮೈನ್ ನಲ್ಲಿ ರಸ್ತೆ ಗುಂಡಿಗಳು ಮತ್ತೆ ಬಾಯಿ  ತೆರೆದಿದ್ದವು. ಈ ಹಿಂದೆ ಇಲ್ಲಿ ಗುಂಡಿಗಳನ್ನು ತಾತ್ಕಾಲಿಕವಾಗಿ ಬಿಬಿಎಂಪಿ ಮುಚ್ಚಿದ್ದು ಇದರಿಂದ ಮತ್ತೆ ರಸ್ತೆಯಲ್ಲಿ ಗುಂಡಿಗಳಾಗಿದ್ದವು.  

ರಸ್ತೆ ಗುಂಡಿಗಳಿಂದ ಸದಾ ಅಶೋಕನಗರ ಮಾರ್ಗವಾಗಿ ವಿವೇಕನಗರ, ಹೊಸೂರು ರಸ್ತೆಗೆ ಸಂಪರ್ಕ ಕಲ್ಪಿಸುವಲ್ಲಿ ಟ್ರಾಫಿಕ್ ಜಾಮ್ ಉಂಟಾಗುತ್ತಿತ್ತು.  ಈ ವೇಳೆ ಅದೇ ರಸ್ತೆ ಟ್ರಾಫಿಕ್ ನಿಯಂತ್ರಣಕ್ಕೆ ನಿಯುಕ್ತಿಗೊಂಡಿದ್ದ ಟ್ರಾಫಿಕ್ ಪೇದೆ ಸುರೇಶ್ ಟ್ರಾಫಿಕ್ ಜಾಮ್ ನಿಯಂತ್ರಿಸುವ ಸಲುವಾಗಿ ಸ್ವತಃ ರಸ್ತೆ ಗುಂಡಿ ಮುಚ್ಚುವ ಕಾರ್ಯಕ್ಕೆ ಇಳಿದಿದ್ದಾರೆ. 

ಪೇದೆ ಸುರೇಶ್ ಅವರ ಕಾರ್ಯಕ್ಕೆ ಸಾರ್ವಜನಿಕರಿಂದ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಾಮರಾಜನಗರ: ಕೂಲಿ ಕೆಲಸ ಮುಗಿಸಿ ವಾಪಾಸ್ ಹೋಗುವ ವೇಳೆ ಕಾಡಾನೆ ದಾಳಿ; ವ್ಯಕ್ತಿ ದುರ್ಮರಣ
ಮಲ್ಲಿಕಾರ್ಜುನ ಖರ್ಗೆಗೆ 'ಭಾರತ ರತ್ನ' ನೀಡುವಂತೆ ಕಾಂಗ್ರೆಸ್ ಮುಖಂಡ ಆಗ್ರಹ