
ಶಹಬಾದ್, ಕಲಬುರಗಿ (ಅ.05): ಮುಂಬೈಯಿಂದ ನಾಗರಕೋಯಿಲ್’ಗೆ ಹೊರಟ್ಟಿದ್ದ ರೈಲಿನಲ್ಲಿ ಕಲಬುರಗಿ ಜಿಲ್ಲೆಯ ಶಹಬಾದ್ ಬಳಿ ಕಳೆದ ರಾತ್ರಿ ದರೋಡೆ ನಡೆದಿರುವ ಘಟನೆ ನಡೆದಿದೆ.
ಎಂಟು ಜನ ದರೋಡೆಕೋರರ ತಂಡದಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ದರೋಡೆಕೋರರು ಪ್ರಯಾಣಿಕರಿಗೆ ಬೆದರಿಸಿ ಹಣ, ಚಿನ್ನಾಭರಣ ದರೋಡೆ ಮಾಡಿದ್ದಾರೆ.
ಆ ವೇಳೆ ದರೋಡೆಕೋರರು ಓರ್ವ ಮಹಿಳೆಯನ್ನು ರೈಲಿನಿಂದ ತಳ್ಳಿದ್ದಾರೆ. ಮಹಿಳೆಗೆ ತೀವ್ರ ಗಾಯಗಳಾಗಿದ್ದು ಶಹಬಾದ ಆಸ್ಪತ್ರೆಗಯಲ್ಲಿ ದಾಖಲಿಸಲಾಗಿದೆ.
ಪ್ರಯಾಣಿಕರು ಓರ್ವ ದರೋಡೆಕೋರನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.