ಕೇರಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಆರಂಭ

Published : Aug 21, 2018, 08:44 AM ISTUpdated : Sep 09, 2018, 10:09 PM IST
ಕೇರಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಆರಂಭ

ಸಾರಾಂಶ

ಕೇರಳದಲ್ಲಿ ಸುರಿದ ಭಾರೀ ಮಳೆಯಿಂದ ಕೇರಳ- ಬೆಂಗಳೂರು ರೈಲು ಸಂಚಾರ ಅಸ್ತವ್ಯಸ್ತವಾಗಿತ್ತು. ಇದೀಗ ಮತ್ತೆ ರೈಲು ಸಂಚಾರ ಪುನರ್ ಆರಂಭವಾಗಿದೆ. ಮಂಗಳೂರು ಮೂಲಕ ರೈಲು ಸಂಚಾರವನ್ನು ಆರಂಭಿಸಲಾಗಿದೆ. 

ಮಂಗಳೂರು: ಮಂಗಳೂರು ಮೂಲಕ ಬೆಂಗಳೂರಿಗೆ ಕೇರಳ ಮಾರ್ಗವಾಗಿ ರೈಲು ಪ್ರಯಾಣ ಆರಂಭವಾಗಿದೆ. ಕಾರವಾರ- ಮಂಗಳೂರು-ಕೆಎಸ್‌ಆರ್‌ ಬೆಂಗಳೂರು ಎಕ್ಸ್‌ಪ್ರೆಸ್‌ (ನಂ. 16514/ 16512) ರೈಲು ಶೊರ್ನೂರು- ಪಾಲಕ್ಕಾಡ್‌-ತಿರುಪತ್ತೂರು ಜಂಕ್ಷನ್‌ ಮಾರ್ಗವಾಗಿ ಬೆಂಗಳೂರು ತಲುಪಲಿದೆ.

ಕಣ್ಣೂರು-ಯಶವಂತಪುರ ಎಕ್ಸ್‌ಪ್ರೆಸ್‌ (ನಂ.16528) ಸೋಮವಾರ ಸಂಜೆ 6.05ಕ್ಕೆ ಕಣ್ಣೂರು ನಿಲ್ದಾಣದಿಂದ ಪ್ರಯಾಣ ಆರಂಭಿಸಿದೆ. ಮಂಗಳೂರು ಸೆಂಟ್ರಲ್‌-ಯಶವಂತಪುರ ರೈಲು ಮಂಗಳೂರು ಸೆಂಟ್ರಲ್‌ನಿಂದ ರಾತ್ರಿ 8.15ಕ್ಕೆ ಸಂಚಾರ ಆರಂಭಿಸಿದೆ.

ಮಂಗಳೂರು ಸೆಂಟ್ರಲ್‌ ನಿಲ್ದಾಣದಿಂದ ಮಧ್ಯಾಹ್ನ 12.50ಕ್ಕೆ ಹೊರಡಬೇಕಾಗಿದ್ದ ಮಂಗಳೂರು ಸೆಂಟ್ರಲ್‌ ಲೋಕಮಾನ್ಯ ತಿಲಕ್‌ ಮುಂಬೈ ಮತ್ಸ್ಯಗಂಧ ಎಕ್ಸ್‌ಪ್ರೆಸ್‌ ತಡವಾಗಿ ಸಂಜೆ 4.30ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಸಂಚಾರ ಆರಂಭಿಸಿದೆ. ಕೊಚುವೆಲಿ-ಚಂಡೀಗಡ ಸಂಪರ್ಕ್ ಕ್ರಾಂತಿ ಎಕ್ಸ್‌ಪ್ರೆಸ್‌ (ನಂ. 12217) ರಾತ್ರಿ 8.15ಕ್ಕೆ ಹಾಗೂ ಎರ್ನಾಕುಳಂ-ಹಝ್ರತ್‌ ನಿಜಾಮುದ್ದೀನ್‌ ಮಂಗಳ ಲಕ್ಷದ್ವೀಪ ಎಕ್ಸ್‌ಪ್ರೆಸ್‌ ರೈಲು ಸಂಜೆ 7.30ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಟಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟಾಕ್ಸಿಕ್ ಸಿನಿಮಾ ರಿಲೀಸ್ ಸಮೀಪಿಸುತ್ತಿದ್ದಂತೆ ಐಟಿ ಪ್ರಕರಣದಲ್ಲಿ ನಟ ಯಶ್‌ಗೆ ಹೈಕೋರ್ಟ್ ರಿಲೀಫ್
ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿಗೆ ಡಿಜಿ ಐಜಿಪಿ ಡಾ ಸಲೀಂ ಖಡಕ್ ಎಚ್ಚರಿಕೆ