ಕಾಶ್ಮೀರದಲ್ಲಿ ಗುಂಡಿನ ಕಾಳಗ; ಒಬ್ಬ ಪೊಲೀಸ್ ಬಲಿ; ಇಬ್ಬರು ಉಗ್ರರ ಹತ್ಯೆ

Published : Mar 05, 2017, 08:10 AM ISTUpdated : Apr 11, 2018, 12:47 PM IST
ಕಾಶ್ಮೀರದಲ್ಲಿ ಗುಂಡಿನ ಕಾಳಗ; ಒಬ್ಬ ಪೊಲೀಸ್ ಬಲಿ; ಇಬ್ಬರು ಉಗ್ರರ ಹತ್ಯೆ

ಸಾರಾಂಶ

ತ್ರಾಲ್ ಎನ್'ಕೌಂಟರ್'ನಲ್ಲಿ ಹತ್ಯೆಯಾದ ಇಬ್ಬರು ಉಗ್ರರ ಪೈಕಿ ಒಬ್ಬಾತ ಪಾಕ್ ರಾಷ್ಟ್ರೀಯನಾಗಿದ್ದಾನೆ. ಆತ ಹಿಜ್ಬುಲ್ ಮುಜಾಹಿದೀನ್ ಸಂಘಟನೆಯ ನಾಯಕನೆನ್ನಲಾಗಿದೆ.

ಶ್ರೀನಗರ(ಮಾ. 05): ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ತ್ರಾಲ್'ನಲ್ಲಿ ಭದ್ರತಾ ಪಡೆಗಳು ಹಾಗು ಉಗ್ರರ ನಡುವೆ 15 ಗಂಟೆಗಳಿಂದ ನಡೆಯುತ್ತಿದ್ದ ಗುಂಡಿನ ಕಾಳಗ ಅಂತ್ಯಗೊಂಡಿದ್ದು, ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದೆ. ದಾಳಿ ನಡೆಸಿದ ಉಗ್ರರ ಗುಂಪಿನ ಇತರರು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಭೀಕರ ಗುಂಡಿನ ಕಾಳಗದಲ್ಲಿ ಒಬ್ಬ ಪೊಲೀಸ್ ಬಲಿಯಾಗಿದ್ದಾರೆ. ತಪ್ಪಿಸಿಕೊಂಡ ಉಗ್ರರನ್ನು ಹಿಡಿಯಲು ಭದ್ರತಾಪಡೆಗಳು ಹಾಗೂ ಜಮ್ಮು-ಕಾಶ್ಮೀರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ.

ತ್ರಾಲ್ ಎನ್'ಕೌಂಟರ್'ನಲ್ಲಿ ಹತ್ಯೆಯಾದ ಇಬ್ಬರು ಉಗ್ರರ ಪೈಕಿ ಒಬ್ಬಾತ ಪಾಕ್ ರಾಷ್ಟ್ರೀಯನಾಗಿದ್ದಾನೆ. ಆತ ಹಿಜ್ಬುಲ್ ಮುಜಾಹಿದೀನ್ ಸಂಘಟನೆಯ ನಾಯಕನೆನ್ನಲಾಗಿದೆ.

ಕಳೆದ ವರ್ಷ ಭದ್ರತಾ ಪಡೆಗಳ ಎನ್'ಕೌಂಟರ್'ನಲ್ಲಿ ಹತ್ಯೆಯಾದ ಹಿಜ್ಬುಲ್ ನಾಯಕ ಬುರ್ಹನ್ ವಾನಿಯ ಸಹವರ್ತಿಗಳೆನ್ನಲಾದ ಇಬ್ಬರು-ಮೂವರು ಉಗ್ರರು ತ್ರಾಲ್'ನ ಹಾಫೂ ನಾಜ್'ನೀಪೋರಾ ಎಂಬಲ್ಲಿದ್ದಾರೆಂಬ ಸುಳಿವು ಪಡೆದ ಭದ್ರತಾ ಪಡೆಗಳು ಕಳೆದ ರಾತ್ರಿಯಂದು ಕಾರ್ಯಾಚರಣೆ ಆರಂಭಿಸಿವೆ. ಜಮ್ಮು-ಕಾಶ್ಮೀರ ಪೊಲೀಸ್ ಪಡೆ ಕೂಡ ಸೇನೆಗೆ ಸಾಥ್ ನೀಡಿದೆ. 15ಗಂಟೆಗಳ ನಿರಂತರ ಗುಂಡಿನ ಚಕಮಕಿ ನಡೆದು ಇಬ್ಬರು ಉಗ್ರರು ಹತರಾಗಿದ್ದಾರೆ. ಇನ್ನೊಬ್ಬ ಉಗ್ರ ತಪ್ಪಿಸಿಕೊಂಡಿರುವ ಸಾಧ್ಯತೆ ಇದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅನ್ಯ ಧರ್ಮಿಯ ಜೊತೆ ಮದುವೆ: ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ- ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ರಸಗೊಬ್ಬರ ಬಳಕೆ ಕಡಿಮೆ ಮಾಡಿ, ಮಣ್ಣಿನ ಆರೋಗ್ಯ ಕಾಪಾಡಿ: ಸಿಎಂ ಸಿದ್ದರಾಮಯ್ಯ ಸಲಹೆ