ಶಬರಿಮಲೆ ದೇಗುಲ ಪ್ರಸಾದಕ್ಕೆ ಮೈಸೂರು CFTRI ನೆರವು!

Published : Apr 30, 2018, 10:04 AM ISTUpdated : Apr 30, 2018, 05:50 PM IST
ಶಬರಿಮಲೆ ದೇಗುಲ ಪ್ರಸಾದಕ್ಕೆ ಮೈಸೂರು CFTRI ನೆರವು!

ಸಾರಾಂಶ

ಲಕ್ಷಾಂತರ ಭಕ್ತರು ಭೇಟಿ ನೀಡುವ ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಭಕ್ತರಿಗೆ ‘ಅಪ್ಪಂ’ ಮತ್ತು ‘ಅರವಣ’ ಪ್ರಸಾದ ಮಾರಾಟ ಮಾಡಲಾಗುತ್ತದೆ. ಆದರೆ, ಮುಂದಿನ ವರ್ಷದಿಂದ ಇಲ್ಲಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ನೀಡುವ ಪ್ರಸಾದ ಸಿಎಫ್‌ಟಿಆರ್‌ಐ ಸಲಹೆಯೊಂದಿಗೆ ಸಿದ್ಧಗೊಳ್ಳಲಿದೆ.

ತಿರುವನಂತಪುರಂ: ಲಕ್ಷಾಂತರ ಭಕ್ತರು ಭೇಟಿ ನೀಡುವ ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಭಕ್ತರಿಗೆ ‘ಅಪ್ಪಂ’ ಮತ್ತು ‘ಅರವಣ’ ಪ್ರಸಾದ ಮಾರಾಟ ಮಾಡಲಾಗುತ್ತದೆ. ಆದರೆ, ಮುಂದಿನ ವರ್ಷದಿಂದ ಇಲ್ಲಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ನೀಡುವ ಪ್ರಸಾದ ಸಿಎಫ್‌ಟಿಆರ್‌ಐ ಸಲಹೆಯೊಂದಿಗೆ ಸಿದ್ಧಗೊಳ್ಳಲಿದೆ.
 ತಿರುಮಲ ತಿರುಪತಿ ದೇವಸ್ಥಾನದಲ್ಲಿ ಲಡ್ಡು ಮತ್ತು ಪಳನಿಯ ಮುರುಗಾ ದೇವಸ್ಥಾನದಲ್ಲಿ ಪಂಚಾಮೃತಂ ಸಿದ್ಧ ಮಾಡುವುದಕ್ಕೆ ಸಲಹೆ ನೀಡುವ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ (ಸಿಎಫ್‌ಟಿಆರ್‌ಐ) ಈಗ ಶಬರಿಮಲೆ ಪ್ರಸಾದಗಳಿಗೆ ಹೊಸ ರುಚಿ ನೀಡಲು ಸಿದ್ಧವಾಗುತ್ತಿದೆ. 
ಸಿಎಫ್‌ಟಿಆರ್‌ಐನ ಮೈಸೂರು ಕ್ಯಾಂಪಸ್‌ನ ಅಧಿಕಾರಿಗಳು ಇತ್ತೀಚೆಗೆ ಭೇಟಿ ನೀಡಿ, ಉತ್ಪಾದನಾ ಪ್ರಕ್ರಿಯೆಯನ್ನು ಪರಿಶೀಲಿಸಿದ್ದಾರೆ. ಸರ್ಕಾರಿ ಸಂಸ್ಥೆಯಾದ ಸಿಎಫ್‌ಟಿಆರ್‌ಐ ನಿಯಮ ಮತ್ತು ಷರತ್ತುಗಳನ್ನು ಅಂತಿಮಗೊಳಿಸಲು ನಿರ್ಧರಿಸಿದೆ. ಮೇ 16ರಂದು ಜ್ಞಾಪನಾಪತ್ರಕ್ಕೆ ಸಹಿ ಮಾಡುವ ಸಾಧ್ಯತೆಯಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಡಿಯೋ: ಅಂತರರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ತಾನಕ್ಕೆ ಅವಮಾನ: ಶಹಬಾಜ್ ಷರೀಫ್‌ರನ್ನು ನಿರ್ಲಕ್ಷಿಸಿದ ಪುಟಿನ್!
ಯುಎಇ ಕಠಿಣ ಕಾನೂನು: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ವೇಶ್ಯಾವಾಟಿಕೆಗೆ ಶಿಕ್ಷೆ ಪ್ರಮಾಣ ಭಾರೀ ಹೆಚ್ಚಳ!