
ನವದೆಹಲಿ[ಅ.13] ಪಾಕಿಸ್ತಾನದ ಸೇನಾ ಮುಖ್ಯಸ್ಥರೊಂದಿಗೆ ಅಪ್ಪುಗೆಯಲ್ಲಿ ಕಾಣಿಸಿಕೊಂಡಿದ್ದ ಸಿಧು ಇಮ್ರಾನ್ ಖಾನ್ ಪ್ರಮಾಣ ವಚನದಲ್ಲಿಯೂ ಭಾಗಿಯಾಗಿದ್ದರು. ಹಿಮಾಚಲ ಪ್ರದೇಶದ ಕಶೌಲಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಸಿಧು ಇಂಥದ್ದೊಂದು ಹೇಳಿಕೆ ನೀಡಿದ್ದಾರೆ.
ದಕ್ಷಿಣ ಭಾರತದಲ್ಲಿ ಪ್ರವಾಸ ಮಾಡುವಾಗ ಮೊದಲಿಗೆ ಅಲ್ಲಿನ ಭಾಷೆ ಅರ್ಥ ಆಗುವುದಿಲ್ಲ. ನಂತರ ಅಲ್ಲಿಯ ಆಹಾರ ಸಹ ಇಷ್ಟವಾಗುವುದಿಲ್ಲ. ಆದರೆ ಪಾಕಿಸ್ತಾನದಲ್ಲಿ ಈ ಯಾವ ಸಮಸ್ಯೆಗಳು ಆಗಲಿಲ್ಲ ಎಂದು ಹೇಳಿದ್ದಾರೆ.
ಸಿಧು ಪ್ರಚಾರಕ್ಕಾಗಿ ಇಂಥ ಹೇಳಿಕೆ ನೀಡುತ್ತಿದ್ದಾರೆ ಎಂಬ ಆಪಾದನೆಯೂ ಕೇಳಿ ಬಂದಿದೆ. ಇದು ಸಿಧು ವೈಯಕ್ತಿಕ ಅಭಿಪ್ರಾಯ ಎಂದು ಕಾಂಗ್ರೆಸ್ ಹೇಳಿದ್ದರೆ ಸಿಧು ಪಾಕ್ ಪ್ರೀತಿಗೆ ಏನು ಹೇಳಬೇಕು ಎಂದು ಬಿಜೆಪಿ ಪ್ರಶ್ನೆ ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.