ದಲಿತರನ್ನು ಅಣ್ಣ-ತಮ್ಮಂದಿರಂತೆ ಕಾಣಿ: ಬಿಎಸ್‌ವೈ

Published : Jun 19, 2017, 12:07 PM ISTUpdated : Apr 11, 2018, 12:50 PM IST
ದಲಿತರನ್ನು ಅಣ್ಣ-ತಮ್ಮಂದಿರಂತೆ ಕಾಣಿ: ಬಿಎಸ್‌ವೈ

ಸಾರಾಂಶ

ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತರು ದಲಿತರನ್ನು ಅಣ್ಣ-ತಮ್ಮಂದಿರಂತೆ ಕಾಣಬೇಕು. ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ದಲಿತರ ಮನೆಯಲ್ಲಿ ಊಟ ಮಾಡಬೇಕೆಂಬ ಅರಿವು ಮೂಡಿಸಲೆಂದೇ ಸ್ವತಃ ನಾನೇ ದಲಿತರ ಮನೆಗಳಿಗೆ ಭೇಟಿ ನೀಡಿ ಊಟ, ಉಪಾಹಾರ ಸೇವಿಸುತ್ತಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿದ್ಧಾರೆ.

ಶಿವಮೊಗ್ಗ: ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತರು ದಲಿತರನ್ನು ಅಣ್ಣ-ತಮ್ಮಂದಿರಂತೆ ಕಾಣಬೇಕು. ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ದಲಿತರ ಮನೆಯಲ್ಲಿ ಊಟ ಮಾಡಬೇಕೆಂಬ ಅರಿವು ಮೂಡಿಸಲೆಂದೇ ಸ್ವತಃ ನಾನೇ ದಲಿತರ ಮನೆಗಳಿಗೆ ಭೇಟಿ ನೀಡಿ ಊಟ, ಉಪಾಹಾರ ಸೇವಿಸುತ್ತಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ಜಿಲ್ಲೆಯ ಸಿರಿಗೆರೆ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿ, ಪ್ರತಿ ಜಿಲ್ಲೆಯಲ್ಲೂ ಈ ರೀತಿಯ ಕಾರ್ಯಕ್ರಮಗಳು ಮುಗಿದ ನಂತರ ರಾಜ್ಯದ ಪ್ರತಿ ವಿಧಾನಸಭೆ ಕ್ಷೇತ್ರಗಳಿಗೆ ಹೋಗಿ ಅಲ್ಲೂ ದಲಿತರ ಕೇರಿ, ಮೊಹಲ್ಲಾಗಳಿಗೆ ಭೇಟಿ ನೀಡಲಿದ್ದೇನೆ. ದಲಿತರಿಗೆ ಒಳ್ಳೆಯ ಉದ್ಯೋಗ ಸಿಗಬೇಕು. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಪ್ರಯತ್ನಿಸು ತ್ತಿದ್ದಾರೆ. ಹೀಗಾಗಿ ದಲಿತರ ಮನೆಗಳಿಗೆ ಭೇಟಿ ನೀಡಿ ಕಷ್ಟ ಆಲಿಸುವ ಕೆಲಸ ಮಾಡುತ್ತಿದ್ದೇನೆ. ಇದನ್ನು ಅರಗಿಸಿಕೊಳ್ಳಲು ಕಾಂಗ್ರೆಸ್‌ಗೆ ಆಗುತ್ತಿಲ್ಲ ಎಂದರು.

ಇದಕ್ಕೂ ಮೊದಲು ಗ್ರಾಮದ ದಲಿತ ಸಮುದಾಯದ ಶ್ರೀನಿವಾಸ್‌ ಅವರ ಮನೆಯಲ್ಲಿ ಉಪಾಹಾರ ಸೇವಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀನಿವಾಸ ಅವರ ಹಿರಿಯ ಪುತ್ರ ಬೆಂಗಳೂರಿನಲ್ಲಿ ಪಿಎಚ್‌ಡಿ ಓದುತ್ತಿದ್ದು, ಅಂಥವರನ್ನು ಗುರುತಿಸಿ ರಾಜ್ಯ ಸರ್ಕಾರ ಸವಲತ್ತು ನೀಡಿದರೆ ಅವರ ಏಳಿಗೆ ಸಾಧ್ಯ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೊಂಡಿ ಬೀಚ್‌ನಲ್ಲಿ ಯಹೂದಿಯರ ಹಬ್ಬದಲ್ಲಿ ರಕ್ತಪಾತಗೈದ ಹಂತಕ ಭಾರತೀಯ: ಹೈದರಾಬಾದ್ ಓಲ್ಡ್ ಸಿಟಿಯಿಂದ ವಲಸೆ ಹೋದವ
'ಮಾದೇಶ್ವರ ದಯಬಾರದೆ..' ಯೂಟ್ಯೂಬ್‌ನಲ್ಲಿ ಟ್ರೆಂಡ್‌ ಆದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದಪ್ರಸಾದ್‌ ಹಾಡು!