
ನವದೆಹಲಿ (ಮೇ.16): ಸುಪ್ರೀಂಕೋರ್ಟ್ ನಲ್ಲಿ ನಡೆಯುತ್ತಿರುವ ತ್ರಿವಳಿ ತಲಾಖ್ ವಿಚಾರಣೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಮುಸಲ್ಮಾನರಲ್ಲಿ ತ್ರಿವಳಿ ತಲಾಖ್ 1400 ವರ್ಷಗಳಿಂದ ಚಾಲ್ತಿಯಲ್ಲಿದೆ. ಅದೇಗೆ ಅನ್ ಇಸ್ಲಾಮಿಕ್ ಆಗುತ್ತದೆ ಎಂದು ಮುಸ್ಲೀಂ ವೈಯಕ್ತಿಕ ಕಾನೂನು ಮಂಡಳಿ ಸುಪ್ರೀಂಕೋರ್ಟ್ ನಲ್ಲಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.
ಕ್ರಿ.ಶ 637 ರಿಂದ ತ್ರಿವಳಿ ತಲಾಖ್ ಜಾರಿಯಲ್ಲಿದೆ. ಇದನ್ನು ಅನ್ ಇಸ್ಲಾಮಿಕ್ ಎನ್ನಲು ನಾವ್ಯಾರು? ಕಳೆದ 1400 ವರ್ಷಗಳಿಂದ ಮುಸ್ಲೀಮರು ಇದನ್ನು ಆಚರಿಸುತ್ತಾ ಬಂದಿದ್ದಾರೆ. ಇದು ನಂಬಿಕೆಯ ಪ್ರಶ್ನೆ. ಹಾಗಾಗಿ ಸಾಂವಿಧಾನಿಕ ನೈತಿಕತೆ ಹಾಗೂ ಸಮಾನತೆಯ ಪ್ರಶ್ನೆಯೇ ಬರುವುದಿಲ್ಲವೆಂದು ಮುಸ್ಲೀಂ ವೈಯಕ್ತಿಕ ಮಂಡಳಿ ಪರ ವಕೀಲ ಕಪಿಲ್ ಸಿಬಲ್ ಹೇಳಿದ್ದಾರೆ.
ರಾಮ ಅಯೋಧ್ಯೆಯಲ್ಲಿ ಹುಟ್ಟಿದ್ದಾನೆಂಬುದು ಹೇಗೆ ಹಿಂದೂಗಳ ನಂಬಿಕೆಯೋ ಹಾಗೆ ತ್ರಿವಳಿ ತಲಾಖ್ ಕೂಡಾ ಮುಸ್ಲೀಮರ ನಂಬಿಕೆ. ರಾಮ ಅಯೋಧ್ಯೆಯಲ್ಲಿ ಹುಟ್ಟಿದ್ದಾನೆಂಬುದು ನಂಬಿಕೆ. ಇಲ್ಲಿ ಸಾಂವಿಧಾನಿಕ ನೈತಿಕತೆಯ ಪ್ರಶ್ನಯೇ ಬರುವುದಿಲ್ಲವೆಂದು ಕಪಿಲ್ ಸಿಬಲ್ ಪಂಚ ಸದಸ್ಯ ನ್ಯಾಯಾಧೀಶರ ಪೀಠಕ್ಕೆ ಕೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.