
ನವದೆಹಲಿ (ಮೇ.17): ತ್ರಿವಳಿ ತಲಾಖ್ ಇಸ್ಲಾಮಿನ ಮೂಲ ಮತ್ತು ಅವಿಭಾಜ್ಯ ಅಂಗವಲ್ಲ. ಧರ್ಮದ ತಳಪಾಯವನ್ನೇ ಬುಡಮೇಲು ಮಾಡುವ ತ್ರಿವಳಿ ತಲಾಖನ್ನು ರದ್ದುಗೊಳಿಸಬೇಕೆಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್’ಗೆ ಹೇಳಿದೆ.
ಮುಸ್ಲೀಂ ಪ್ರಾಬಲ್ಯ ದೇಶಗಳಲ್ಲೇ ತ್ರಿವಳಿ ತಲಾಖ್ ಜಾರಿಯಲ್ಲಿಲ್ಲ. ಹಾಗಿದ್ದ ಮೇಲೆ ಇದು ಇಸ್ಲಾಂಗೆ ಅಗತ್ಯವೆಂದು ಹೇಳಲು ಸಾಧ್ಯವಿಲ್ಲ. ಇದು ಅವರವರ ಆಯ್ಕೆಗೆ ಬಿಟ್ಟ ವಿಚಾರವೆಂದು ಮುಸ್ಲೀಂ ವೈಯಕ್ತಿಕ ಮಂಡಳಿ ವಾದಿಸಿದರೆ ತ್ರಿವಳಿ ತಲಾಖ್ ಹೇಗೆ ಇಸ್ಲಾಂನ ಅವಿಭಾಜ್ಯ ಅಂಗವಾಗುತ್ತದೆ ಎಂದು ಅಟಾರ್ನಿ ಜನರಲ್ ಮುಕುಲ್ ರೋಹಟ್ಗಿ ನ್ಯಾಯಾಲಯವನ್ನು ಪ್ರಶ್ನಿಸಿದ್ದಾರೆ.
ತ್ರಿವಳಿ ತಲಾಖ್ ಮುಸ್ಲೀಂ ಸಮುದಾಯದ ಮಹಿಳೆಯರು ಹಾಗೂ ಪುರುಷರ ನಡುವಿನ ಹೋರಾಟ. ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣನ್ನು ಶೋಷಿಸಲಾಗುತ್ತಿದೆ. ಇದು ಕೇವಲ ಅಂತರ್ ಧರ್ಮದ ವಿಚಾರವಾಗಿರದೇ ಮಹಿಳಾ ಹಕ್ಕಿನ ವಿಚಾರವಾಗಿದೆ. ಸುಪ್ರೀಂಕೋರ್ಟ್ ಇದನ್ನು ಅಸಾಂವಿಧಾನಿಕವೆಂದು ಘೋಷಿಸಬೇಕು ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.