
ನವದೆಹಲಿ(ಡಿ.27): ಮಹತ್ವದ ಬೆಳವಣಿಗೆಯೊಂದರಲ್ಲಿ ತ್ರಿವಳಿ ತಲಾಖ್ ಮಸೂದೆಗೆ ಲೋಕಸಭೆ ಒಪ್ಪಿಗೆ ನೀಡಿದೆ. ಈ ಮೂಲಕ ತ್ರಿವಳಿ ತಲಾಖ್ನಿಂದ ನರಳುತ್ತಿದ್ದ ಸಾವಿರಾರು ಮುಸ್ಲಿಂ ಮಹಿಳೆಯರ ರಕ್ಷಣೆಗೆ ಲೋಕಸಭೆ ಮುಂದಾಗಿದೆ.
ಮುಸ್ಲಿಂ ಮಹಿಳೆಯರ ವಿವಾಹ ಹಕ್ಕು ರಕ್ಷಣೆಗೆ ಒತ್ತು ನೀಡುವ ತ್ರಿವಳಿ ತಲಾಖ್ ವಿಧೇಯಕ ಲೋಕಸಭೆಯಲ್ಲಿ ಅಂಗೀಕಾರವಾಗಿದೆ.
ಚಳಿಗಾಲದ ಅಧಿವೇಶನದ ಕಲಾಪದಲ್ಲಿ ತ್ರಿವಳಿ ತಲಾಖ್ ವಿಧೇಯಕ ಮಂಡಿಸಲಾಯಿತು. ಈ ಕುರತಾದ ನಿರಂತರ ಚರ್ಚೆಯ ನಂತರ ವಿಧೇಯಕಕ್ಕೆ ಧ್ವನಿಮತದ ಮೂಲಕ ಅಂಗೀಕಾರ ದೊರೆಯಿತು.
ಚರ್ಚೆ ವೇಳೆ ಕಾಂಗ್ರೆಸ್ ಮತ್ತು ಎಐಎಡಿಎಂಕೆ, ತೃಣಮೂಲ ಕಾಂಗ್ರೆಸ್ ಮತ್ತು ಆರ್ಜೆಡಿ ಸದಸ್ಯರು ಸಭಾತ್ಯಾಗ ಮಾಡಿದರು. ತದನಂತರ ವಿಧೇಯಕವನ್ನು ಮತಕ್ಕೆ ಹಾಕಿದಾಗ ವಿಧೇಯಕ ಪರವಾಗಿ 245 ಮತ ಹಾಗೂ ವಿಧೇಯಕದ ವಿರುದ್ಧವಾಗಿ ಕೇವಲ 11 ಮತ ಬಂದವು.
ತ್ರಿವಳಿ ತಲಾಕ್ ತಡೆ ಕಾಯ್ದೆಯು ಯಾವುದೇ ಧರ್ಮ ಅಥವಾ ಸಮುದಾಯದ ವಿರೋಧಿಯಲ್ಲ. ಮಹಿಳೆಯರ ರಕ್ಷಣೆ ಮತ್ತು ಗೌರವದ ಪ್ರತೀಕವಾಗಿದೆ. ಹೀಗಿರುವಾಗ ಎಲ್ಲರೂ ಅದನ್ನು ಬೆಂಬಲಿಸಬೇಕು ಎಂದು ಕಾನೂನು ಸಚಿವ ರವಿಶಂಕರ್ ಪ್ರಸಾದ್ ಈ ವೇಳೆ ಪ್ರತಿಪಾದಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.