
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಅಗರ್ತಲಾ ರ್ಯಾಲಿ ವೇಳೆ ನಡೆದ ಕಾರ್ಯಕ್ರಮದ ವೇದಿಕೆಯಲ್ಲಿಯೇ ತ್ರಿಪುರ ಸಚಿವರೋರ್ವರು ತಮ್ಮ ಮಹಿಳಾ ಸಹೋದ್ಯೋಗಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದೆ.
ಮುಖ್ಯಮಂತ್ರಿ ಬಿಪ್ಲವ್ ದೇವ್ ಸಂಪುಟದಲ್ಲಿ ಸಚಿವರಾಗಿರುವ ಮನೋಜ್ ಕಂಟಿ ದೇಬ್ ಸಮಾಜ ಕಲ್ಯಾಣ ಸಚಿವೆ ಸಂತಾನ ಚಕ್ಮಾ ಅವರ ಸೊಂಟದ ಮೇಲೆ ಕೈ ಇಟ್ಟಿದ್ದಾರೆ. ಈ ವೇಳೆ ಸಚಿವೆ ಅವರ ಕೈಯನ್ನು ತಳ್ಳಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.
ಈ ಘಟನೆ ಬೆನ್ನಲ್ಲೇ ಇಲ್ಲಿನ ವಿಪಕ್ಷಗಳು ಸಚಿವ ಮನೋಜ್ ಕಂಟಿಯವರನ್ನು ಸಂಪುಟದಿಂದ ಕೈ ಬಿಡಬೇಕು ಎಂದು ಆಗ್ರಹಿಸಿವೆ. ತಮ್ಮ ಸಹೋದ್ಯೋಗಿಗೆ ಈ ರೀತಿ ಕಿರಕುಳ ನೀಡಿದ ಸಚಿವರ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ