
ತೆಲಂಗಾಣ : ತೆಲಂಗಾಣ ರಾಷ್ಟ್ರ ಸಮಿತಿ [ಟಿಆರ್ ಎಸ್ ] ಲೋಕಸಭಾ ಚುನಾವಣೆಯ ಬಳಿಕ ಬಿಜೆಪಿಗೆ ಬೆಂಬಲ ನೀಡುವ ಸಾಧ್ಯತೆ ಇದೆ ಎನ್ನುವ ಮಾತುಗಳು ಕೇಳಿ ಬಂದಿದೆ.
ಶನಿವಾರ ದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಟಿಆರ್ ಎಸ್ ಮುಖಂಡ ಕೆ. ಚಂದ್ರಶೇಖರ್ ರಾವ್ ಅವರ ನಡುವೆ ಒಂದು ಗಂಟೆಗೂ ಅಧಿಕ ಕಾಲ ಮಾತುಕತೆ ನಡೆದಿದ್ದು, ಈ ಅನುಮಾನಕ್ಕೆ ಕಾರಣವಾಗಿದೆ. ಇದರಿಂದ ಈ ಎರಡೂ ಪಕ್ಷಗಳೂ ಕೂಡ ಮೈತ್ರಿ ಮಾಡಕೊಳ್ಳಬಹುದು ಎನ್ನಲಾಗಿದೆ.
ಇತ್ತೀಚೆಗಷ್ಟೇ ಎನ್ ಡಿಎ ಒಕ್ಕೂಟದಿಂದ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಹೊರ ಬಂದು ಲೋಕಸಭೆಯಲ್ಲಿ ಕಳೆದ 2 ವಾರಗಳ ಹಿಂದೆ ಅವಿಶ್ವಾಸ ನಿರ್ಣಯವನ್ನು ಮಂಡಿಸಿತ್ತು.
ಇದೀಗ ಎನ್ ಡಿಎ ಭಾಗವಾಗಿರದ ಟಿಆರ್ ಎಸ್ ಚುನಾವಣೆ ಬಳಿಕ ಬಿಜೆಪಿ ನೇತೃತ್ವದ ಎನ್ ಡಿಎ ಜೊತೆ ಸೇರಲಿದೆ. ಈ ಮೂಲಕ ಎನ್ ಡಿಎ ಬಲವು ಹೆಚ್ಚಳವಾಗಲಿದೆ ಎನ್ನುವ ಬಗ್ಗೆ ಮಾತುಗಳು ಕೇಳಿ ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.