ಡಿಕೆಶಿ, ಎಚ್'ಡಿಕೆ ನನಗೆ ದುರ್ಯೋಧನ, ದುಶ್ಯಾಸನರಿದ್ದಂತೆ ಎಂದ ಬಿಜೆಪಿ ನಾಯಕಿ

Published : Feb 17, 2017, 02:23 PM ISTUpdated : Apr 11, 2018, 12:56 PM IST
ಡಿಕೆಶಿ, ಎಚ್'ಡಿಕೆ ನನಗೆ ದುರ್ಯೋಧನ, ದುಶ್ಯಾಸನರಿದ್ದಂತೆ ಎಂದ ಬಿಜೆಪಿ ನಾಯಕಿ

ಸಾರಾಂಶ

ಇಬ್ಬರು ನನಗೆ ಸಮಾನ ಶತ್ರುಗಳು

ರಾಮನಗರ(ಫೆ.17): ಡಿಕೆಶಿ ಹಾಗೂ ಹೆಚ್'ಡಿಕೆ ನನಗೆ ದುರ್ಯೋಧನ ಹಾಗೂ ದುಶ್ಯಾಸನರಿದ್ದಂತೆ, ಇಬ್ಬರು ನನಗೆ ಸಮಾನ ಶತ್ರುಗಳು ಎಂದು ಮಾಜಿ ಸಂಸದೆ ಹಾಗೂ ಬಿಜೆಪಿ ಮುಖಂಡೆ ತೇಜಸ್ವಿನಿ ಶ್ರೀರಮೇಶ್ ಇಬ್ಬರು ನಾಯಕರ ವಿರುದ್ಧ ಕೆಂಡಕಾರಿದ್ದಾರೆ.ಇವರಿಬ್ಬರಲ್ಲಿ ದುರ್ಯೋಧನ, ದುಶ್ಯಾಸನ ಯಾರೆಂದು ಮಾಧ್ಯಮಗಳು ತೀರ್ಮಾನಿಸಲಿ ಎಂದಿದ್ದಾರೆ.

ಡಿಕೆಶಿ ವಿರುದ್ಧ ತಿರುಗಿ ಬಿದ್ದ ಕೆಪಿಸಿಸಿ ಸದಸ್ಯ

ರಾಮನಗರ ಜಿಲ್ಲಾ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಹಾಲಿ ಕೆಪಿಸಿಸಿ ಸದಸ್ಯ ಎ.ಮಂಜು ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ತಿರುಗಿಬಿದ್ದಿದ್ದಾರೆ.

ಇತ್ತೀಚಿಗಷ್ಟೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಮಾಗಡಿ ಕ್ಷೇತ್ರದಿಂದ ಮುಂದಿನ ಚುನಾವಣೆಯಲ್ಲಿ ಹೆಚ್.ಸಿ. ಬಾಲಕೃಷ್ಣಗೆ ಟಿಕೆಟ್ ನೀಡಲಾಗುವುದು ಎಂದು ಮಾಗಡಿಯಲ್ಲಿ ಹೇಳಿಕೆ ನೀಡಿದ್ದರು. ಇಂದು ರಾಮನಗರ ತಾಲೂಕಿನ ಬಿಡದಿಯ ಕಂಚಗಾರನಹಳ್ಳಿ ಗ್ರಾ.ಪಂ ಅಧ್ಯಕ್ಷ ಚುನಾವಣೆಯಲ್ಲಿ ಭಾಗವಹಿಸಿದ್ದ ಮಂಜು ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದ್ದು, ಜೆಡಿಎಸ್ ಪಕ್ಷದ 7ಮಂದಿ ಬಂಡಾಯ ಶಾಸಕರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗುವುದು ಎಂದು ಹೇಳಿದ್ದಾರೆ. ಅವರಿಗೆ ಟಿಕೆಟ್ ನೀಡುವುದು ಬಿಡುವುದು ಪಕ್ಷದ ಹೈಕಮಾಂಡ್. ಡಿಕೆಶಿ ಹೇಳಿದಂತೆ ಪಕ್ಷ 7 ಮಂದಿಗೆ ಟಿಕೆಟ್ ನೀಡುವುದಿಲ್ಲ. ಒಂದು ವೇಳೆ ನೀಡಿದರೆ ನಾನು ನನ್ನ ಕಾರ್ಯಕರ್ತರೊಂದಿಗೆ ಚರ್ಚಿಸಿ ಮುಂದಿನ ತಿರ್ಮಾನ ತಗೆದುಕೊಳ್ಳುತ್ತೆನೆ ಎಂದು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೂರು ವರ್ಷಗಳಲ್ಲಿ 57,733 ಸೈಬರ್ ಅಪರಾಧ, ₹5,473 ಕೋಟಿ ವಂಚನೆ: ಗೃಹ ಸಚಿವ ಪರಮೇಶ್ವರ್
ಮೇಕೆದಾಟು, ಭದ್ರಾ, ಕೃಷ್ಣಾ ಯೋಜನೆಗಳಲ್ಲಿ ಕೇಂದ್ರ ಸರ್ಕಾರ ವಿಳಂಬ: ಡಿ.ಕೆ.ಶಿವಕುಮಾರ್ ಆಕ್ರೋಶ