
ಜಕಾರ್ತ: ಇಂಡೊನೇಷ್ಯಾದ ಸುಲವೆಸಿ ದ್ವೀಪದಲ್ಲಿ ರಿಕ್ಟರ್ ಮಾಪಕದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಶುಕ್ರವಾರ ನಡೆದಿದ್ದು, ಓರ್ವ ಮೃತಪಟ್ಟು, ನೂರಾರು ಮನೆಗಳು ನಾಶಗೊಂಡಿವೆ. ಭೂಮಿಯ ಕಂಪನದಿಂದ ಬೆದರಿ ಮನೆಗಳಿಂದ ಹೊರಬಂದ ಜನ ಕೂಗುತ್ತಿದ್ದ ದೃಶ್ಯಗಳು ಕಂಡುಬಂದಿವೆ.
ವಿವಿಧೆಡೆ ವ್ಯಾಪಕ ಹಾನಿಯಾಗಿದ್ದು, ಸರಣಿ ಕಂಪನ ಸಂಭವಿಸಬಹುದಾದ ಹಿನ್ನೆಲೆಯಲ್ಲಿ ಜನರು ಮನೆ, ಕಟ್ಟಡಗಳಿಂದ ಹೊರಗಿರುವಂತೆ ಸೂಚನೆ ನೀಡಲಾಗಿದೆ. ಇನ್ನೊಂದೆಡೆ, ದೇಶದ ದುರಂತ ನಿರ್ವಹಣಾ ಸಂಸ್ಥೆ ಭೂಕಂಪದ ಹಿನ್ನೆಲೆಯಲ್ಲಿ ಮೊದಲು ಸುನಾಮಿ ಮುನ್ನೆಚ್ಚರಿಕೆ ನೀಡಿತ್ತಾದರೂ, ಬಳಿಕ ಅದನ್ನು ಹಿಂಪಡೆದಿದೆ.
ಸುಲವೆಸಿ ದ್ವೀಪದಲ್ಲಿ 10 ಕಿ.ಮೀ. ಆಳದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಸುಲವೆಸಿ ಪ್ರಾಂತ್ಯದ ರಾಜಧಾನಿ ಪಲು ನಗರಕ್ಕಿಂತ 78 ಕಿ.ಮೀ. ಉತ್ತರದಲ್ಲಿ ಕಂಪನದ ಕೇಂದ್ರ ಬಿಂದುವಾಗಿತ್ತು ಎಂದು ಅಮೆರಿಕ ಭೂವಿಜ್ಞಾನ ಸಂಸ್ಥೆ ತಿಳಿಸಿದೆ. ಡೊಂಗಲ ಪ್ರದೇಶದಲ್ಲಿ ಹೆಚ್ಚು ಹಾನಿ ಸಂಭವಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.