6 ದಿನ ತಿರುಪತಿ ತಿಮ್ಮಪ್ಪ ದರ್ಶನಕ್ಕೆ ಇಲ್ಲ ಅವಕಾಶ

Published : Aug 11, 2018, 12:30 PM ISTUpdated : Sep 09, 2018, 08:54 PM IST
6 ದಿನ ತಿರುಪತಿ ತಿಮ್ಮಪ್ಪ ದರ್ಶನಕ್ಕೆ ಇಲ್ಲ ಅವಕಾಶ

ಸಾರಾಂಶ

ತಿರುಪತಿ ದೇಗುಲದಲ್ಲಿ ಮಹಾ ಸಂಪ್ರೋಕ್ಷಣೆ ಶುದ್ಧೀಕರಣ ಪ್ರಕ್ರಿಯೆ ಇರುವುದರಿಂದ ದೇವಾಲಯದಲ್ಲಿ ಭಕ್ತರ ದರ್ಶನಕ್ಕೆ ಅವಕಾಶ ಇರುವುದಿಲ್ಲ.  ಒಟ್ಟು 6 ದಿನಗಳ ಕಾಲ ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ. 

ತಿರುಪತಿ: ತಿರುಮದ ವಿಶ್ವಪ್ರಸಿದ್ಧ ವೆಂಕಟೇಶ್ವರ ದೇವಾಲಯದಲ್ಲಿ 6 ದಿವಸಗಳ ಮಹಾಸಂಪ್ರೋಕ್ಷಣೆ ಶುದ್ಧೀಕರಣ ವಿಧಿ ಶನಿವಾರ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ನಿತ್ಯ 30 ಸಾವಿರ ಭಕ್ತರಿಗೆ ಮಾತ್ರ ಈ 6 ದಿವಸಗಳ ಅವಧಿಯಲ್ಲಿ ಪ್ರವೇಶಾವಕಾಶ ಕಲ್ಪಿಸಲಾಗುತ್ತದೆ.

ಶನಿವಾರ ರಾತ್ರಿ 9 ಗಂಟೆಗೆ ಅಷ್ಟಬಂಧ ಬಾಲಾಲಯ ಮಹಾಸಂಪ್ರೋಕ್ಷಣೆ ಆರಂಭವಾಗಲಿದೆ. ಈ ವೇಳೆ ಅರ್ಚಕರು ದೇವಾಲಯದ ಗರ್ಭಗುಡಿಯಲ್ಲಿ ಇರುವ ಸಣ್ಣಪುಟ್ಟರಿಪೇರಿ ಕಾರ್ಯ ಕೈಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಶುದ್ಧೀಕರಣ ನಡೆಸಲಾಗುತ್ತದೆ.

ವಾಡಿಕೆಯಂತೆ ನಿತ್ಯ 1 ಲಕ್ಷ ಭಕ್ತರು ತಿರುಮಲಕ್ಕೆ ಭೇಟಿ ನೀಡುತ್ತಾರೆ. ಈ 6 ದಿನಗಳಲ್ಲಿ ನಿತ್ಯ ಕೇವಲ 30 ಸಾವಿರ ಭಕ್ತರಿಗೆ ಅವಕಾಶ ನೀಡಲಾಗುತ್ತದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೆಹೆಂದಿಯಾಗಿತ್ತು, ಆದರೆ ಮದುವೆಯಾಗಲ್ಲ: ಕೊನೆಗೂ Palash Muchhal ಜೊತೆಗಿನ ಸಂಬಂಧಕ್ಕೆ ತೆರೆ ಎಳೆದ Smriti Mandhana
ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ