
ನಮ್ಮ ಪರಂಪರೆಯಲ್ಲಿ ತುಳಸಿಗೆ ಬಹಳ ಮಹತ್ವವಿದೆ. ತುಳಸಿಯನ್ನು ಪೂಜಿಸುತ್ತೇವೆ. ಇದರ ಎಲೆಗಳಲ್ಲಿ ರೋಗ ನಿರೋಧಕ ಶಕ್ತಿಯಿರುವುದರಿಂದ ತುಳಸಿಯನ್ನು ಔಷಧವಾಗಿ ಬಳಸಲಾಗುತ್ತದೆ.
ನಮ್ಮ ಆರೋಗ್ಯವನ್ನು ವೃದ್ಧಿಸುವ ಚೈತನ್ಯವನ್ನು ತುಂಬುವ ಸಾಮರ್ಥ್ಯ ಇದರಲ್ಲಿದೆ. ಚೆನ್ನಾಗಿ ತೊಳೆದ ತುಳಸಿ ಎಲೆಗಳನ್ನು ಜಜ್ಜಿ ಅದಕ್ಕೆ ದೊಡ್ಡ ಚಮಚ ಜೇನು ಬೆರೆಸಿ ಚೆನ್ನಾಗಿ ಕಲಕಿ. ಈ ನೀರನ್ನು ಬೆಳಿಗ್ಗೆ ಎದ್ದ ಕೂಡಲೇ ಕುಡಿಯಬೇಕು. ಬಳಿಕ ಮುಕ್ಕಾಲು ಗಂಟೆಯವರೆಗೂ ಏನನ್ನೂ ಸೇವಿಸಬಾರದು. ನಂತರ ಉಪಾಹಾರ ಸೇವಿಸಿ ದೈನಂದಿನ ಕೆಲಸ ಆರಂಭಿಸಿದರೆ ಆರೋಗ್ಯ ವೃದ್ಧಿಸುತ್ತದೆ. ಇಡೀ ದಿನ ಲವಲವಿಕೆಯಿಂದಿರಿಸುತ್ತದೆ. ಇದನ್ನು ದಿನನಿತ್ಯ ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಸಾಮಾನ್ಯವಾಗಿ ಕಾಡುವ ಶೀತವನ್ನು ಕಡಿಮೆ ಮಾಡುತ್ತದೆ. ತುಳಸಿ ಎಲೆ ಮತ್ತು ಜೇನಿನ ಮಿಶ್ರಣ ಕೆಮ್ಮಿಗೆ ಅತ್ಯುತ್ತಮ ಔಷಧಿಯಾಗಿದ್ದು ಸತತವಾಗಿ ಕಾಡುವ ಶ್ವಾಸ ಸಂಬಂಧಿ ತೊಂದರೆಗಳು ನಿವಾರಣೆಯಾಗುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.