ನನ್ನ ಗೆಲುವಿಗೆ ಕೈ ಬೆಂಬಲಿಸಿದ್ದು ನಿಜ: ತುಮಕೂರು ಬಿಜೆಪಿ ಎಂಪಿ

Published : Jun 03, 2019, 12:44 PM ISTUpdated : Jun 03, 2019, 12:46 PM IST
ನನ್ನ ಗೆಲುವಿಗೆ ಕೈ ಬೆಂಬಲಿಸಿದ್ದು ನಿಜ: ತುಮಕೂರು ಬಿಜೆಪಿ ಎಂಪಿ

ಸಾರಾಂಶ

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಅಭೂತಪೂರ್ವ ಗೆಲುವು ಸಾಧಿಸಿದ ಬಿಜೆಪಿ ನಾಯಕರೋರ್ವರು ಇದೇ ನನ್ನ ಕೊನೆಯ ಚುನಾವಣೆ. ಇನ್ನು ಮುಂದೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದಿದ್ದಾರೆ. 

ತುಮಕೂರು : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಿಂದ ಸ್ಪರ್ಧೆ ಮಾಡಿ ದೇವೇಗೌಡರ ವಿರುದ್ಧ ಅಭೂತಪೂರ್ವ ಗೆಲುವು ಸಾಧಿಸಿದ ಜಿ.ಎಸ್.ಬಸವರಾಜು  ಇದೇ ನನ್ನ ಕೊನೆಯ ಚುನಾವಣೆ ಎಂದಿದ್ದಾರೆ.

ಇನ್ನು ಬಸವರಾಜು ಕೈ ಹಿಡಿಯಲಿದ್ದಾರೆ ಎನ್ನುವ ವದಂತಿಗೂ ಸ್ಪಷ್ಟನೆ ನೀಡಿದ್ದು, ನಾನು ಕಾಂಗ್ರೆಸ್ ಗೆ ಹೋಗುವುದು ಇಲ್ಲ. ಯಾರನ್ನು ಅಲ್ಲಿಂದ ಕರೆತರುವುದು ಇಲ್ಲ ಹೀಗೆಂದು ಹೇಳಿದ್ದಾರೆ. 

ನನಗೆ ಚುನಾವಣೆ ಸಂದರ್ಭದಲ್ಲಿ ಹಲವು ಕಾಂಗ್ರೆಸ್ ನಾಯಕರು ಬೆಂಬಲ ನೀಡಿದ್ದಾರೆ. ಕೆ.ಎನ್. ರಾಜಣ್ಣ ಅವರು ಬೆಂಬಲ ನೀಡಿದ್ದಾರೆ. ಇನ್ನು ರಾಜಣ್ಣ ಬೆಂಬಲಿಗರೂ ಕೂಡ ಸಿಂಪತಿಯಿಂದ ತಮಗೆ ಮತ ನೀಡಿದ್ದಾರೆ ಎಂದು ತುಮಕೂರಿನಲ್ಲಿ ಬಸವರಾಜು ಹೇಳಿದರು. 

ಅಲ್ಲದೇ ತಾವು ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಇಚ್ಛಿಸುವುದಿಲ್ಲ ಎಂದ ಅವರು ಆರೋಗ್ಯ ಚೆನ್ನಾಗಿದ್ದಲ್ಲಿ ಯಾರನ್ನಾದರೂ ಸ್ಪರ್ಧೆಗೆ ನಿಲ್ಲಿಸುತ್ತೇನೆ ಎಂದರು. 

ತುಮಕೂರಿನಲ್ಲಿ ಜೆಡಿಎಸ್ ಹಿರಿಯ ನಾಯಕ ಮಾಜಿ ಪ್ರಧಾನಿ ದೇವೇಗೌಡರ ವಿರುದ್ಧ ತಾವು ಗೆಲುವು ಸಾಧಿಸಿದ್ದು, ಮಧುಗಿರಿ ಹಾಲಿ ಶಾಸಕ ವೀರಭದ್ರು್ು ಕಾರ್ಯ ವೈಖರಿ ನೋಡಿ ಜನ ಬಿಜೆಪಿ ಮೆಚ್ಚಿ ಮತ ನೀಡಿದ್ದಾರೆ ಎಂದು ಬಸವರಾಜು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಣವೀರ್ ನಟನೆಯ ಧುರಂಧರ್ ಸಿನಿಮಾದ ಕತೆ ಭಾರತೀಯ ಸೇನೆಯ ಹೀರೋ ಮೇಜರ್ ಮೋಹಿತ್ ಶರ್ಮಾ ಅವರದ್ದಾ?
ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?