ತುಮಕೂರಿನ ಹೇಮಾವತಿ ನೀರಿನ ಹೋರಾಟಕ್ಕೆ ಮೊದಲ ಬಲಿ: ನಾಲೆಗೆ ಹಾರಿ ರೈತ ಆತ್ಮಹತ್ಯೆ

Published : Aug 31, 2017, 12:48 PM ISTUpdated : Apr 11, 2018, 12:58 PM IST
ತುಮಕೂರಿನ ಹೇಮಾವತಿ ನೀರಿನ ಹೋರಾಟಕ್ಕೆ ಮೊದಲ ಬಲಿ: ನಾಲೆಗೆ ಹಾರಿ ರೈತ ಆತ್ಮಹತ್ಯೆ

ಸಾರಾಂಶ

ತುಮಕೂರಿನ ಹೇಮಾವತಿ ನೀರಿನ ಹೋರಾಟಕ್ಕೆ ಮೊದಲ ಬಲಿಯಾಗಿದೆ. ಗುಬ್ಬಿ ತಾಲೂಕಿನ ಸೋಮಲಾಪುರದಲ್ಲಿ ರೈತನೊಬ್ಬ ನಾಲೆಗೆ ಹಾರಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತುಮಕೂರು(ಆ.31): ತುಮಕೂರಿನ ಹೇಮಾವತಿ ನೀರಿನ ಹೋರಾಟಕ್ಕೆ ಮೊದಲ ಬಲಿಯಾಗಿದೆ. ಗುಬ್ಬಿ ತಾಲೂಕಿನ ಸೋಮಲಾಪುರದಲ್ಲಿ ರೈತನೊಬ್ಬ ನಾಲೆಗೆ ಹಾರಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಚಲುವರಾಜು (35) ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ರೈತ. ಈ ರೈತ ತೂಬು ಮುಚ್ಚುವುದನ್ನು ವಿರೋಧಿಸಿ ನಾಲೆಗೆ ಹಾರಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಲೆಗೆ ಹಾರಿದಾಗ ನೀರಿನ ಸೆಳೆತಕ್ಕೆ ಸಿಕ್ಕು ಈ ರೈತ ಕೊಚ್ಚಿಹೋಗಿದ್ದಾನೆ.

ಸೋಮಲಾಪುರಕ್ಕೆ ನೀರು ನಿಲ್ಲಿಸಿ, ಕುಣಿಗಲ್​​ಗೆ ನೀರು ಬಿಡುವಂತೆ ತುಮಕೂರು ಜಿಲ್ಲಾಧಿಕಾರಿ ಆದೇಶ ನೀಡಿದ್ದರು. ಪೊಲೀಸರು ಡಿಸಿಯ ಆದೇಶವನ್ನು ಪಾಲಿಸಲು ಮುಂದಾಗಿದ್ದರು. ಆದರೆ ನಾಲೆ ಬಳಿ ರೈತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ಸಂದರ್ಭದಲ್ಲಿ ಸ್ಥಳೀಯ ರೈತರಿಂದ ಪ್ರತಿಭಟನೆಯೂ ನಡೆದಿತ್ತು. ಇವೆಲ್ಲದರಿಂದ ಬೇಸತ್ತ ರೈತ ನಾಲೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಣವೀರ್ ನಟನೆಯ ಧುರಂಧರ್ ಸಿನಿಮಾದ ಕತೆ ಭಾರತೀಯ ಸೇನೆಯ ಹೀರೋ ಮೇಜರ್ ಮೋಹಿತ್ ಶರ್ಮಾ ಅವರದ್ದಾ?
ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?