
ಬೆಂಗಳೂರು[ಡಿ.06] ತುಮಕೂರಿನ ಸಿದ್ಧಗಂಗಾ ಮಠದ ಶತಾಯುಷಿ ಡಾ.ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಚೆನ್ನೈನಿಂದ ಆಗಮಿಸಿದ್ದ ವೈದ್ಯರ ತಂಡ ಶ್ರೀಗಳ ಆರೋಗ್ಯದ ವಿವರ ಪಡೆದುಕೊಂಡು ತೆರಳಿದೆ.
ಸಿಎಂ ಕುಮಾರಸ್ವಾಮಿ ಶೃಂಗೇರಿಯಲ್ಲಿ ಇದ್ದರೂ ಶ್ರೀಗಳ ಆರೋಗ್ಯದ ಮಾಹಿತಿ ಪಡೆದುಕೊಂಡಿದ್ದಾರೆ. ಶ್ರೀಗಳನ್ನು ಹೆಚ್ಚಿನ ಆರೈಕೆಗಾಗಿ ಚೆನ್ನೈಗೆ ಕರೆದುಕೊಂಡು ಹೋಗಬೇಕೆ? ಎನ್ನುವ ಮಾತುಕತೆ ಸಹ ನಡೆದಿದೆ.
ನನಗೆಷ್ಟು ವಯಸ್ಸಾಯ್ತು? ಎಂದು ಪ್ರಶ್ನಿಸಿದ ಸಿದ್ದಗಂಗಾ ಶ್ರೀಗಳು
ಒಂದು ವೇಳೆ ಕರೆದುಕೊಂಡು ಹೋಗುವುದಾದರೆ ಹೇಗೆ? ರಸ್ತೆ ಮೂಲಕವೋ ಅಥವಾ ಹೆಲಿಕಾಪ್ಟರ್ ಮೂಲಕವೋ ಎಂಬ ಚರ್ಚೆ ಸಹ ನಡೆದಿದೆ. ಸಕಲ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ತುಮಕೂರು ಜಿಲ್ಲಾಧಿಕಾರಿ ಡಾ. ರಾಕೇಶ್ ಮಾಹಿತಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.