
ತುಮಕೂರು(ಜುಲೈ 25): ತನ್ನ ತಾಯಿ ಹಾಗೂ ಮಗಳನ್ನು ಧಾರ್ಮಿಕ ಕೇಂದ್ರವೊಂದಕ್ಕೆ ಭೇಟಿ ಮಾಡಿಸಲು ಸರ್ಕಾರಿ ವಾಹನ ಹಾಗೂ ಪಿಎಸ್'ಐ ಭದ್ರತೆಯನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪ ತುಮಕೂರು ಎಸ್ಪಿ ದಿವ್ಯಾ ಗೋಪಿನಾಥ್ ಮೇಲೆ ಕೇಳಿಬಂದಿದೆ. ದಿವ್ಯಾ ಗೋಪಿನಾಥ್'ರವರ ತಾಯಿ ಹಾಗೂ ಮಗಳನ್ನು ಕೊರಟಗೆರೆ ಪಿಎಸ್'ಐ ಮಂಜುನಾಥ್ ತಮ್ಮ ಪೊಲೀಸ್ ವಾಹನದಲ್ಲಿ ಇಬ್ಬರು ಕಾನ್ಸ್'ಟೇಬಲ್ ರಕ್ಷಣೆಯಲ್ಲಿ ಗೊರವನಹಳ್ಳಿ ಮಹಾಲಕ್ಷ್ಮಿ ದೇವಾಲಯಕ್ಕೆ ಕರೆದುಕೊಂಡು ಹೋಗಿರುವ ವಿಡಿಯೋ ದೊರಕಿದ್ದು, ವ್ಯಾಪಕ ಟೀಕೆಗೆ ಗುರಿಯಾದಂತಾಗಿದೆ.
ಒಟ್ನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಿರುವ ಪೊಲೀಸ್ ಅಧೀಕ್ಷಕಿಯೇ ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದು, ಡ್ಯೂಟಿಯಲ್ಲಿದ್ದ ಪಿಎಸ್ಐರವರನ್ನು ತಮ್ಮ ಖಾಸಗಿ ಸಹಾಯಕ್ಕೆ ಬಳಸಿಕೊಂಡಿದ್ದಲ್ಲದೆ ಪೊಲೀಸ್ ಕಾರಿನಲ್ಲಿ ಕರೆದುಕೊಂಡು ಹೋಗುವ ಎಸ್ಕಾರ್ಟ್ ಸೇವೆಯನ್ನೂ ಪಡೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.