
ತುಮಕೂರು (14): ತಿಪಟೂರಿನ ಮಾಜಿ ಶಾಸಕ ಬಿ.ನಂಜಾಮರಿ ಮೊಮ್ಮಗಳ ನಾಮಕರಣ ನೆಪದಲ್ಲಿ ರಾಜಕೀಯ ಶಕ್ತಿ ಬಲ ಪ್ರದರ್ಶನ ಮಾಡಿದ್ದಾರೆ.
ತಿಪಟೂರು ಕ್ಷೇತ್ರದಲ್ಲಿ ಜೆಡಿಎಸ್ ಟಿಕೆಟ್'ಗೆ ನಾಲ್ಕು ಜನ ಆಕಾಂಕ್ಷಿಗರಿದ್ದಾರೆ. ಇವರಲ್ಲಿ ನಂಜಾಮರಿ ಕೂಡಾ ಒಬ್ಬರು. ಹಾಗಾಗಿ ಮೊಮ್ಮಗಳು ತನಿಷ್ಕಾಳ ನಾಮಕರಣದ ನೆಪದಲ್ಲಿ ಮನೆ ಆವರಣದಲ್ಲೇ ರಾಜಕೀಯ ಶಕ್ತಿ ಪ್ರದರ್ಶನ ಮಾಡಿದ್ದಾರೆ. ತಿಪಟೂರು ಕ್ಷೇತ್ರದ 15ಕ್ಕೂ ಹೆಚ್ಚು ವಿವಿಧ ಮಠಾಧೀಶರನ್ನು ಕರೆ ತಂದು ಪಾದಪೂಜೆ ಮಾಡಿ ಸ್ವಾಮಿಜಿಗಳ ಬೆಂಬಲ ಕೋರಿದ್ದಾರೆ. ಅಲ್ಲದೆ ಮುಸ್ಲಿಂ ಸಮುದಾಯ ಮುಖಂಡರನ್ನು ತಮ್ಮ ಬೆಂಬಲಕ್ಕೆ ನಿಲ್ಲಿಸಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.