ಉತ್ತರ ಪ್ರದೇಶದಲ್ಲಿ ಆಧಾರ್ ಇಲ್ಲದ್ದಕ್ಕೆ ಚಿಕಿತ್ಸೆ ನಕಾರ : ಆಸ್ಪತ್ರೆ ಗೇಟಿನ ಬಳಿ ಹೆರಿಗೆ

Published : Feb 01, 2018, 08:51 AM ISTUpdated : Apr 11, 2018, 12:42 PM IST
ಉತ್ತರ ಪ್ರದೇಶದಲ್ಲಿ ಆಧಾರ್ ಇಲ್ಲದ್ದಕ್ಕೆ ಚಿಕಿತ್ಸೆ ನಕಾರ : ಆಸ್ಪತ್ರೆ ಗೇಟಿನ ಬಳಿ ಹೆರಿಗೆ

ಸಾರಾಂಶ

ಆಧಾರ್ ಇಲ್ಲವೆಂಬ ಕಾರಣಕ್ಕೆ ಆಸ್ಪತ್ರೆ ಯೊಂದು ಚಿಕಿತ್ಸೆ ನಿರಾಕರಿಸಿದ ಪರಿಣಾಮ ಗರ್ಭಿಣಿಯೊಬ್ಬರು ಆಸ್ಪತ್ರೆಯ ಗೇಟಿನ ಬಳಿ  ಮಗುವಿಗೆ ಜನ್ಮ ನೀಡಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಲಖನೌ: ಆಧಾರ್ ಇಲ್ಲವೆಂಬ ಕಾರಣಕ್ಕೆ ಆಸ್ಪತ್ರೆ ಯೊಂದು ಚಿಕಿತ್ಸೆ ನಿರಾಕರಿಸಿದ ಪರಿಣಾಮ ಗರ್ಭಿಣಿಯೊಬ್ಬರು ಆಸ್ಪತ್ರೆಯ ಗೇಟಿನ ಬಳಿ  ಮಗುವಿಗೆ ಜನ್ಮ ನೀಡಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಸಂಬಂಧಿಕರು ಮಹಿಳೆಯನ್ನು ಇಲ್ಲಿನ ಶಹಗಂಜ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದಾಗ, ಸಿಬ್ಬಂದಿ, ಆಧಾರ್ ಮತ್ತು ಬ್ಯಾಂಕ್ ಖಾತೆಯ ನಂಬರ್ ಕೇಳಿದ್ದಾರೆ.

ಅವು ಇಲ್ಲ ಎಂಬ ಕಾರಣಕ್ಕೆ ಆಕೆಯನ್ನು ದಾಖಲಿಸಿಕೊಳ್ಳಲು ಸಿಬ್ಬಂದಿ ನಿರಾಕರಿಸಿದ್ದಾರೆ. ಈ ನಡುವೆ ಮಹಿಳೆ ಆಸ್ಪತ್ರೆಯ ಗೇಟ್‌ಬಳಿಯೇ ಮಗುವಿಗೆ ಜನ್ಮ ನೀಡಿದ್ದಾಳೆ. ಈ ಘಟನೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ಮನೆಯಲ್ಲಿ ಒಂದು ರೂಪಾಯಿ ಇಲ್ಲ ಆದ್ರೂ ಸಿಸಿಟಿವಿ ಯಾಕೆ ಹಾಕಿದ್ರಿ: ಸಿಕ್ಕಿದ್ದನ್ನು ದೋಚಿ ಪತ್ರ ಬರೆದಿಟ್ಟು ಹೋದ ಕಳ್ಳ