
ಬೆಂಗಳೂರು[ಅ.06]: ಹಣಕಾಸು ಮಸೂದೆ ಅಂಗೀಕಾರಕ್ಕಾಗಿ ಮೂರು ದಿನಗಳ ಕಾಲ ಕರೆದಿರುವ ವಿಧಾನಮಂಡಲ ಅಧಿವೇಶನದ ಕಲಾಪದ ಚಿತ್ರೀಕರಣಕ್ಕೆ ನಿರ್ಬಂಧ ಹೇರಲು ವಿಧಾನಸಭೆ ಸಚಿವಾಲಯ ಚಿಂತನೆ ಹೊಂದಿರುವುದು ವಿವಾದಕ್ಕೆ ಕಾರಣವಾಗಿದೆ.
ಅ.10ರಿಂದ ಮೂರು ದಿನಗಳ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದ್ದು, ಈ ವೇಳೆ ಟೀವಿ ಕ್ಯಾಮರಾಗಳನ್ನು ಉಭಯ ಸದನದಿಂದ ಹೊರಗಿಡಲು ಸಭಾಧ್ಯಕ್ಷರು ಚಿಂತನೆ ಹೊಂದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪ್ರತಿಪಕ್ಷಗಳ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸ್ಪೀಕರ್ ಅವರು ಬುಧವಾರ ಈ ಬಗ್ಗೆ ಸ್ಪಷ್ಟನೆ ನೀಡಲಿದ್ದಾರೆಂದು ಸಚಿವಾಲಯದ ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ ಲೋಕಸಭೆ ಮಾದರಿಯಲ್ಲಿ ಖಾಸಗಿ ವಾಹಿನಿಗಳಿಗೆ ಅವಕಾಶ ನೀಡದೇ, ಸರ್ಕಾರಿ ಚಾನಲ್ ಮೂಲಕ ಕಲಾಪ ಪ್ರಸಾರ ಮಾಡುವ ಚಿಂತನೆಯನ್ನು ಸ್ಪೀಕರ್ ಹೊಂದಿದ್ದಾರೆಂದು ಹೇಳಲಾಗುತ್ತಿದೆ. ಈ ಬಗ್ಗೆ ಸ್ಪೀಕರ್ ಅವರನ್ನು ಪತ್ರಿಕೆ ಸಂಪರ್ಕಿಸುವ ಪ್ರಯತ್ನ ಸಫಲವಾಗಲಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.