ಟಿವಿ ಪತ್ರಕರ್ತ ರವೀಶ್ ಕುಮಾರ್ ಗೆ ಕುಲದೀಪ್ ನಯ್ಯರ್ ಪ್ರಶಸ್ತಿ

Published : Mar 20, 2017, 02:21 PM ISTUpdated : Apr 11, 2018, 12:53 PM IST
ಟಿವಿ ಪತ್ರಕರ್ತ ರವೀಶ್ ಕುಮಾರ್ ಗೆ ಕುಲದೀಪ್ ನಯ್ಯರ್ ಪ್ರಶಸ್ತಿ

ಸಾರಾಂಶ

ಜಾಗತಿಕ ಪತ್ರಿಕೋದ್ಯಮಕ್ಕೆ ನೀಡಿದ ಕೊಡುಗೆಗಾಗಿ ಟಿವಿ ಪತ್ರಕರ್ತ ರವೀಶ್ ಕುಮಾರ್  ಕುಲದೀಪ್ ನಯ್ಯರ್ ಪತ್ರಿಕೋದ್ಯಮ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಪ್ರಶಸ್ತಿ ಫಲಕದ ಜೊತೆ 1 ಲಕ್ಷ ನಗದು ಬಹುಮಾನವನ್ನು ಪಡೆದಿದ್ದಾರೆ.

ನವದೆಹಲಿ (ಮಾ.20): ಜಾಗತಿಕ ಪತ್ರಿಕೋದ್ಯಮಕ್ಕೆ ನೀಡಿದ ಕೊಡುಗೆಗಾಗಿ ಟಿವಿ ಪತ್ರಕರ್ತ ರವೀಶ್ ಕುಮಾರ್  ಕುಲದೀಪ್ ನಯ್ಯರ್ ಪತ್ರಿಕೋದ್ಯಮ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಪ್ರಶಸ್ತಿ ಫಲಕದ ಜೊತೆ 1 ಲಕ್ಷ ನಗದು ಬಹುಮಾನವನ್ನು ಪಡೆದಿದ್ದಾರೆ.

ಗಾಂಧಿ ಶಾಂತಿ ಫೌಂಡೇಶನ್ ಇಂಡಿಯಾ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ಸಮಾರಂಭವನ್ನು ಆಯೋಜಿಸಿದ್ದು ಹಿರಿಯ ಪತ್ರಕರ್ತ ಕುಲದೀಪ್ ನಯ್ಯರ್ ರವೀಶ್ ಕುಮಾರ್ ಗೆ ಪ್ರಶಸ್ತಿ ಪ್ರಧಾನ ಮಾಡಿದರು. ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲೇ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತಿದೆ ಎಂದು ಕುಲದೀಪ್ ನಯ್ಯರ್ ತಮಾಷೆ ಮಾಡಿದರು.

ದೇಶೀಯ ಮಾಧ್ಯಮಗಳಲ್ಲಿ ಅಪ್ರತಿಮ ಸಾಧನೆ ಮಾಡಿದವರಿಗೆ ಈ ವರ್ಷದಿಂದ ಕುಲದೀಪ್ ನಯ್ಯರ್ ಪ್ರಶಸ್ತಿಯನ್ನು ಕೊಟ್ಟು ಗೌರವಿಸಲಾಗುತ್ತದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭೂಪರಿವರ್ತನೆ ಇನ್ನು ಅತಿ ಸರಳ
ಅರುಣಾಚಲದ ಮೇಲೆ ಚೀನಾ ಕಣ್ಣು : ಅಮೆರಿಕ