
ನವದೆಹಲಿ (ಜೂ.06): ಕಳೆದ ಮೂರು ವರ್ಷದಲ್ಲಿ ದೇಶದಲ್ಲಿ ಕಡಿಮೆ ಅಭಿವೃದ್ಧಿಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಟಿವಿಯಲ್ಲಿ ಮಾತ್ರ ಹೀರೋ ಹಾಗೆ ಕಾಣಿಸಿಕೊಳ್ಳುತ್ತಾರೆ ಆದರೆ ವಾಸ್ತವದಲ್ಲಿ ಅವರು ಜೀರೋ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಗುಲಾಂ ನಬಿ ಆಜಾದ್ ಟೀಕಿಸಿದ್ದಾರೆ.
“ಇದು ಕೇವಲ ಘೋಷಣೆ ಮತ್ತು ಜನಪ್ರಿಯತೆ ಸರ್ಕಾರ. ಪ್ರಧಾನಿಯವರು ಟಿವಿಯಲ್ಲಿ ಹೀರೋ ತರ ಕಾಣಿಸುತ್ತಾರೆ. ನಿಜವಾಗಿ ಜೀರೋ ಆಗಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಭಯವನ್ನು ಮಾತ್ರ ಸೃಷ್ಟಿಸಿದ್ದಾರೆ ಎಂದು ಗುಲಾಂ ನಬಿ ಆಜಾದ್ ಹೇಳಿದ್ದಾರೆ.
ಪಕ್ಷದ ಸಭೆಯಲ್ಲಿ ಸೋನಿಯಾ ಗಾಂಧಿ, ಮೋದಿ ಸರ್ಕಾರ ಕೇವಲ ಮೂರು ವರ್ಷ ಪೂರೈಸಿದೆ. ಎಲ್ಲಿ ಸಾಮರಸ್ಯಯಿತ್ತೋ ಅಲ್ಲಿ ಒಡಕು ಮೂಡಿದೆ. ಸಹನೆ ಇದ್ದಲ್ಲಿ ಪ್ರಚೋದನೆ ಮಾಡಿದ್ದಾರೆ. ಕಾಶ್ಮೀರದಲ್ಲಿ ಗಲಭೆ ಉಂಟಾಗಿದೆ. ಆರ್ಥಿಕವಾಗಿ ಬಲಿಷ್ಠರಾಗಿದ್ದೆವು. ಈಗ ಅರ್ಥ ವ್ಯವಸ್ಥೆ ಸ್ಥಗಿತಗೊಂಡಿದೆ. ದೇಶದಲ್ಲಿ ಸಂಕುಚಿತ ಮನೋಭಾವನೆ ಉಂಟಾಗಿದೆ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.