
ಮೈಸೂರು : ಮೈಸೂರಿನಲ್ಲಿ ದರ್ಶನ್ ಕಾರು ಅಪಘಾತ ಪ್ರಕರಣಕ್ಕೆ ಇದೀಗ ಮತ್ತೊಂದು ಟ್ವಿಸ್ಟ್ ದೊರಕಿದೆ.
ಮೈಸೂರಿನಿಂದ ಕಾರ್ಯಕ್ರಮ ಮುಗಿಸಿಕೊಂಡು ಬೆಂಗಳೂರಿಗೆ ವಾಪಸಾಗುತ್ತಿದ್ದ ವೇಳೆ ಮೈಸೂರಿನ ಹೊರ ವಲಯದ ಜೆಎಸ್ ಎಸ್ ಅರ್ಬನ್ ಹಾಥ್ ಬಳಿ ತಡರಾತ್ರಿ 2.55ಕ್ಕೆ ದರ್ಶನ್ ಕಾರು ಅಪಘಾತವಾಗಿದೆ ಎನ್ನುವ ವಿಚಾರ ತಿಳಿದು ಬಂದಿದೆ.
ಇನ್ನು ದರ್ಶನ್, ಪ್ರಜ್ವಲ್ ದೇವರಾಜ್, ದೇವರಾಜ್ ಅವರು ಕಾರಿನಲ್ಲಿದ್ದು, ದರ್ಶನ್ ಅವರೇ ಕಾರುಚಲಾಯಿಸಿಕೊಂಡು ಬರುತ್ತಿದ್ದರು ಎನ್ನಲಾಗಿತ್ತು. ಆದರೆ ಇದೀಗ ಅವರ ಚಾಲಕ ಕಾರು ಚಲಾವಣೆ ಮಾಡುತ್ತಿದ್ದರು ಎನ್ನಲಾಗಿದೆ.
ಈ ವೇಳೆ ತಿರುವಿನಲ್ಲಿ ಆಗಮಿಸುವ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆ. ಡಿವೈಡರ್ ಗೆ ದರ್ಶನ್ ಸೇರಿ ನಾಲ್ವರು ಇದ್ದ ಕಾರ್ ಗುದ್ದಿದೆ. ಈ ವೇಳೆ ಪಲ್ಟಿಯಾಗಿ ಮೂವರು ಗಾಯಗೊಂಡಿದ್ದಾರೆ.
ಸ್ಥಳದಲ್ಲಿ ಕಾರು ಮಗುಚಿ ಬಿದ್ದ ವೇಳೆ ಸ್ಥಳೀಯರು ಆಗಮಿಸಿ ಕಾರನ್ನು ಮೇಲೆತ್ತಿದ್ದಾರೆ.
ಸದ್ಯ ಗಾಯಗೊಂಡಿದ್ದ ಮೂವರನ್ನೂ ಕೂಡ ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.