
ಮಂಗಳೂರು (ಡಿ.24): ಕರಾವಳಿಯಲ್ಲಿ ಯುವತಿ ನಾಪತ್ತೆಯಾದ ಪ್ರಕರಣಕ್ಕೆ ಹೊಸದಾದ ಟ್ವಿಸ್ಟ್ ಸಿಕ್ಕಿದೆ. ಮಗಳು ಚಿನ್ನಾಭರಣವನ್ನು ಕಳವು ಮಾಡಿಕೊಂಡು ಹೋಗಿದ್ದಾಳೆ ಎಂದು ಯುವತಿಯ ತಾಯಿ ದೂರು ನೀಡಿದ್ದು, ಈ ಸಂಬಂಧ ಇದೀಗ ಕ್ರಮ ಕೈಗೊಳ್ಳಲಾಗಿದೆ.
ಲವ್ ಜಿಹಾದ್ ಹೆಸರಲ್ಲಿ ನಾಪತ್ತೆಯಾಗಿದ್ದ ಜೋಡಿಯು ಮುಂಬೈನಲ್ಲಿ ಪತ್ತೆಯಾಗಿದ್ದು, ಆಕೆಯನ್ನ ಪೊಲೀಸರು ಮುಂಬೈನಿಂದ ಕರೆತಂದು ಕೋರ್ಟ್’ಗೆ ಹಾಜರುಪಡಿಸಿದ್ದು, ಇದೀಗ ಆಕೆಗೆ ಡಿ.26ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಮನೆಯವರಿಗೆಲ್ಲಾ ಅಮಲು ಪದಾರ್ಥ ನೀಡಿ ಚಿನ್ನವನ್ನು ಕದ್ದು ಪರಾರಿಯಾಗಿದ್ದಾಳೆ ಎಂದು ದೂರು ನೀಡಲಾಗಿತ್ತು.
ಈ ಹಿನ್ನೆಲೆಯಲ್ಲಿ ಆಕೆಯನ್ನು ಕೋರ್ಟ್’ಗೆ ಹಾಜರುಪಡಿಸಲಾಗಿದ್ದು, ದೂರಿನ ಆಧಾರದಲ್ಲಿ ಆಕೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಳೆದ ಡಿ. 9ರಂದು ತನ್ನ ಮದುವೆಯ ದಿನವೇ ಯುವತಿ ನಾಪತ್ತೆಯಾಗಿದ್ದಳು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.