
ಹಾಸನ(ಆ.28): ಹಾಸನ ಜಿಲ್ಲೆ ಸಕಲೇಶಪುರ ವಿಭಾಗದ ಸಾರಿಗೆ ಬಸ್ ಚಾಲಕನ ಲವ್ ಕಹಾನಿಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ಟು ವೇ ಕಹಾನಿಯ ಅಸಲಿಯತ್ತನ್ನು ಮೊಬೈಲ್ ಮೆಸೇಜ್'ಗಳು ಬಯಲು ಮಾಡಿವೆ.
ಹಾಸನದ ಆದರಗೆರೆ-ದೊಡ್ಡನಹಳ್ಳಿಯ ಎಲ್ಎಲ್ಬಿ ವಿದ್ಯಾರ್ಥಿನಿ ತನುಶ್ರೀ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಸಾರಿಗೆ ಬಸ್ ಚಾಲಕ ಸಂತೋಷ್ ಕಾರಣ ಎಂದು ಈ ಹಿಂದೆ ಆರೋಪಿಸಲಾಗಿತ್ತು. ತನುಶ್ರೀ ಪೋಷಕರು ನಮ್ಮ ಮಗಳ ಸಾವಿಗೆ ಸಂತೋಷನೇ ಕಾರಣ. ಆತ ನನ್ನನ್ನು ಪ್ರೀತಿಸು, ಮದುವೆಯಾಗು ಎಂದು ತಮ್ಮ ಮಗಳಿಗೆ ಬಲವಂತ ಮಾಡುತ್ತಿದ್ದ. ಆತನ ಕಿರುಕುಳದಿಂದಲೇ ಮಗಳು ವಿಷ ಕುಡಿದು ಸತ್ತಿದ್ದಾಳೆ ಎಂದು ದೂರಿದ್ದರು. ಇದಕ್ಕೆ ಪುಷ್ಟಿ ಎಂಬಂತೆ ತನುಶ್ರೀ ಸಹ ಸಾಯುವ ಮುನ್ನ ಸಂತೋಷನ ವಿರುದ್ಧ ಹೇಳಿಕೆ ನೀಡಿದ್ದಳು.
ಆದರೀಗ ಸಂತೋಷ್'ದು ಒನ್ ವೇ ಲವ್ ಅಲ್ಲ ಅಥವಾ ಬಲವಂತ ಸಹ ಮಾಡಿಲ್ಲ. ಬದಲಾಗಿ ತನುಶ್ರೀಯೂ ಸಹ ಸಂತೋಷನನ್ನು ಅತಿಯಾಗಿ ಪ್ರೀತಿಸಿದ್ದಳು. ಮಾನಸಿಕವಾಗಿ ಪತಿ ಅಂತಲೇ ಸ್ವೀಕಾರ ಮಾಡಿದ್ದಳು. ನೀನು ನಮ್ಮ ಮನೆಯವರಿಗೆ ಪೋನ್ ಮಾಡಿ ನನ್ನನ್ನು ಮದುವೆ ಮಾಡಿಕೊಡುವಂತೆ ಕೇಳು ಎಂದು ಹೇಳಿದ್ದ ನಿಜ ಸಂಗತಿ ಆಕೆ ಸಂತೋಷ್ಗೆ ಮಾಡಿರುವ ಹತ್ತಾರು ಮೆಸೇಜ್ ಗಳಿಂದ ಬಯಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.