
ಪಣಜಿ[ಅ.16] ಗೋವಾದ ಇಬ್ಬರು ಕಾಂಗ್ರೆಸ್ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಬಿಜೆಪಿ ಸೇರಲು ವೇದಿಕೆ ಸಿದ್ಧ ಮಾಡಿಕೊಂಡಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭೇಟಿ ಮಾಡಿದ ನಂತರ ಬಿಜೆಪಿ ಸೇರುವ ಮಾತನಾಡಿದ್ದಾರೆ.
ಕಾಂಗ್ರೆಸ್ ಶಾಸಕರಾಗಿದ್ದ ದಯಾನಂದ್ ಸೊಪ್ಟೆ ಮತ್ತು ಸುಭಾಶ್ ಶಿರೋಡ್ಕರ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ಗೋವಾ ವಿಧಾನಸಭೆ ಸ್ಪೀಕರ್ ಪ್ರಮೋದ್ ಸಾವಂತ್ ಅವರು ತಿಳಿಸಿದ್ದು ಅಂಗೀಕಾರ ಸಹ ಆಗಿದೆ. 40 ಶಾಸಕರ ವಿಧಾನಸಭೆಯಲ್ಲಿ ಕಾಂಗ್ರೆಸ್ ಬಲ 16ರಿಂದ 14ಕ್ಕೆ ಕುಸಿದಿದೆ.
ಗೋವಾದ ಬಿಜೆಪಿ ಸರಕಾರದ ವಿರುದ್ಧ ಅವಿಶ್ವಾಸ ಮಂಡಿಸಲು ಮುಂದಾಗಿದ್ದ ಕಾಂಗ್ರೆಸ್ ಗೆ ಈ ರಾಜೀನಾಮೆ ಭಾರೀ ಮುಖಭಂಗ ಮಾಡಿದೆ. ಒಟ್ಟಿನಲ್ಲಿ ಈ ಬೆಳವಣಿಗೆ ಗೋವಾದಲ್ಲಿ ಬಿಜೆಪಿ ಸರಕಾರ ಮುಂದುವರಿಯಲಿದೆ ಎಂಬ ಮಾತಿಗೆ ಮತ್ತಷ್ಟು ಪುಷ್ಠಿ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.