ಕಾಂಗ್ರೆಸ್ ಶಾಸಕರು ಉಳಿದಿರುವ ರೆಸಾರ್ಟ್'ಗೆ 982 ಕೋಟಿ ದಂಡ

Published : Jul 31, 2017, 10:19 PM ISTUpdated : Apr 11, 2018, 12:51 PM IST
ಕಾಂಗ್ರೆಸ್ ಶಾಸಕರು ಉಳಿದಿರುವ ರೆಸಾರ್ಟ್'ಗೆ 982 ಕೋಟಿ ದಂಡ

ಸಾರಾಂಶ

ಹೊರವಲಯದ 77.29 ಎಕರೆ ಸರ್ಕಾರಿ ಭೂಮಿಯಲ್ಲಿ ಈಗಲ್‌ಟನ್ ರೆಸಾರ್ಟ್ ನಿರ್ಮಿಸಿರುವ ಮೆಸರ್ಸ್ ಚಾಮುಂಡೇಶ್ವರಿ ಬಿಲ್ಡ್ ಟೆಕ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಸುಪ್ರಿಂಕೋರ್ಟ್ ಆದೇಶದ ಅನುಸಾರ ಆಕ್ರಮಿತ ಭೂಮಿಯ ಮಾರುಕಟ್ಟೆ ಮೌಲ್ಯವಾದ 982  ಕೋಟಿ.ರೂಗಳನ್ನು ಒಂದು ತಿಂಗಳೊಳಗೆ ಸರ್ಕಾರಕ್ಕೆ ಭರಿಸದಿದ್ದರೆ ಭೂಮಿ ವಶಪಡಿಸಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಬೆಂಗಳೂರು (ಜು.31): ಹೊರವಲಯದ 77.29 ಎಕರೆ ಸರ್ಕಾರಿ ಭೂಮಿಯಲ್ಲಿ ಈಗಲ್‌ಟನ್ ರೆಸಾರ್ಟ್ ನಿರ್ಮಿಸಿರುವ ಮೆಸರ್ಸ್ ಚಾಮುಂಡೇಶ್ವರಿ ಬಿಲ್ಡ್ ಟೆಕ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಸುಪ್ರಿಂಕೋರ್ಟ್ ಆದೇಶದ ಅನುಸಾರ ಆಕ್ರಮಿತ ಭೂಮಿಯ ಮಾರುಕಟ್ಟೆ ಮೌಲ್ಯವಾದ 982  ಕೋಟಿ.ರೂಗಳನ್ನು ಒಂದು ತಿಂಗಳೊಳಗೆ ಸರ್ಕಾರಕ್ಕೆ ಭರಿಸದಿದ್ದರೆ ಭೂಮಿ ವಶಪಡಿಸಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ.


ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಶ್ಯಾನಮಂಗಲ, ಬಿಲ್ಲ ಕೆಂಪನಹಳ್ಳಿ ಹಾಗೂ ಬಾನಂದೂರು ಗ್ರಾಮಗಳಲ್ಲಿ 77.29 ಎಕರೆ ಸರ್ಕಾರಿ ಜಮೀನನ್ನು ಅನಧಿಕೃತವಾಗಿ ಒತ್ತುವರಿ ಮಾಡಿರುವ ಮೆ. ಚಾಮುಂಡೇಶ್ವರಿ ಬಿಲ್ಡ್ ಟೆಕ್ ಪ್ರೈವೇಟ್ ಲಿಮಿಟೆಡ್‌ನ  ಈಗಲ್‌ಟನ್ ಗಾಲ್ಫ್ ರೆಸಾರ್ಟ್‌ಗೆ ಸುಪ್ರಿಂಕೋರ್ಟ್‌ನ ನಿರ್ದೇಶನದಂತೆ ಮಾರುಕಟ್ಟೆ ದರದ ಆಧಾರದ ಮೇರೆಗೆ ರಾಜ್ಯ ಸರ್ಕಾರವು ವಿಧಿಸಿರುವ ದಂಡ  982.07 ಕೋಟಿ ರೂ ಗಳನ್ನು ಒಂದು ತಿಂಗಳೊಳಗಾಗಿ ಪಾವತಿಸಿದಲ್ಲಿ  ಜಮೀನು ಅಕ್ರಮ ಸಕ್ರಮ ಮಾಡಲು ಸಂಪುಟ ಸಮ್ಮತಿಸಿದೆ. ಈಗಾಗಲೇ ವಸೂಲಿ ಮಾಡಿರುವ ಪರಿವರ್ತನಾ ಶುಲ್ಕವನ್ನು ಮರು ಪಾವತಿಸಿ, ಸಂಪೂರ್ಣ ಹಣ ಭರಿಸಿದ ನಂತರ ರೆಸಾರ್ಟ್‌ಗೆ ಜಮೀನು ಮಂಜೂರು ಮಾಡಬಹುದು ಎಂದು ಸುಪ್ರಿಂಕೋರ್ಟ್ ಹೇಳಿತ್ತು. ಹೀಗಾಗಿ ಜಿಲ್ಲಾಧಿಕಾರಿಗಳಿಗೆ ಸೂಕ್ತ ಕ್ರಮಕ್ಕೆ ನಿರ್ದೇಶನ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೊಂಡಿ ಬೀಚ್ ರೀತಿಯಲ್ಲೇ ಮತ್ತೊಂದು ಉಗ್ರ ಕೃತ್ಯ, ಗುಂಡಿನ ದಾಳಿಯಲ್ಲಿ 10 ಸಾವು, ಹಲವರು ಗಂಭೀರ
ಐಟಿ ಪಾರ್ಕ್ ಗುತ್ತಿಗೆ 30 ವರ್ಷ, ವಿಸ್ತರಣೆಗೂ ಅವಕಾಶ: ಸಚಿವ ಪ್ರಿಯಾಂಕ್‌ ಖರ್ಗೆ