ಕನ್ನಡಿಗ ಎಸ್.ವಿ. ಸುನೀಲ್ ಹಾಗೂ ಪ್ರಕಾಶ್ ನಂಜಪ್ಪಗೆ ಅರ್ಜುನ ಪ್ರಶಸ್ತಿ

Published : Aug 22, 2017, 04:16 PM ISTUpdated : Apr 11, 2018, 12:54 PM IST
ಕನ್ನಡಿಗ ಎಸ್.ವಿ. ಸುನೀಲ್ ಹಾಗೂ ಪ್ರಕಾಶ್ ನಂಜಪ್ಪಗೆ ಅರ್ಜುನ ಪ್ರಶಸ್ತಿ

ಸಾರಾಂಶ

ಕೇಂದ್ರ ಸರ್ಕಾರವು ಪ್ರತಿ ವರ್ಷ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಹಾಗೂ ವಿಶಿಷ್ಟ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಕೊಡಮಾಡುವ ಅರ್ಜುನ ಪ್ರಶಸ್ತಿಗೆ ಕರ್ನಾಟಕದ ಎಸ್.ವಿ. ಸುನೀಲ್ ಹಾಗೂ ಶೂಟರ್ ಪಿ.ಎನ್. ಪ್ರಕಾಶ್ ಆಯ್ಕೆಯಾಗಿದ್ದಾರೆ.

ನವದೆಹಲಿ: ಕೇಂದ್ರ ಸರ್ಕಾರವು ಪ್ರತಿ ವರ್ಷ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಹಾಗೂ ವಿಶಿಷ್ಟ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಕೊಡಮಾಡುವ ಅರ್ಜುನ ಪ್ರಶಸ್ತಿಗೆ ಕರ್ನಾಟಕದ ಎಸ್.ವಿ. ಸುನೀಲ್ ಹಾಗೂ ಶೂಟರ್ ಪಿ.ಎನ್. ಪ್ರಕಾಶ್ ಆಯ್ಕೆಯಾಗಿದ್ದಾರೆ.

2017ನೇ ಸಾಲಿನ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ, ದ್ರೋಣಾಚಾರ್ಯ ಪ್ರಶಸ್ತಿ, ಅರ್ಜುನ ಪ್ರಶಸ್ತಿ ಹಾಗೂ ಧ್ಯಾನ್ ಚಂದ್ ಪ್ರಶಸ್ತಿಗಳ ಪಟ್ಟಿ ಇಂದು ಬಿಡುಗಡೆಯಾಗಿದ್ದು ಹಾಕಿ ಆಟಗಾರ ಎಸ್.ವಿ. ಸುನೀಲ್ ಹಾಗೂ ಶೂಟರ್ ಪಿ.ಎನ್. ಪ್ರಕಾಶ್ ಅರ್ಜುನ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಇಬ್ಬರು, ದ್ರೋಣಾಚಾರ್ಯ ಪ್ರಶಸ್ತಿಗೆ 7 ಮಂದಿ, ಅರ್ಜುನ ಪ್ರಶಸ್ತಿಗೆ 17 ಮಂದಿ ಹಾಗೂ ಧ್ಯಾನ್ ಚಂದ್ ಪ್ರಶಸ್ತಿಗೆ 3 ಮಂದಿ ಆಯ್ಕೆಯಾಗಿದ್ದಾರೆ.

ಇದೇ ಆ.29ರಂದು ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಪದಕ ಹಾಗೂ ಪ್ರಶಸ್ತಿಯ ಜೊತೆಗೆ, ರಾಜೀವ್ ಗಾಂಧಿ ಖೆಲ್ ರತ್ನ ಪ್ರಶಸ್ತಿ ವಿಜೇತರಿಗೆ ರೂ.7.5 ಲಕ್ಷ ನಗದು, ಹಾಗೂ ಅರ್ಜುನ, ದ್ರೋಣಾಚಾರ್ಯ ಮತ್ತು ಧ್ಯಾನ್’ಚಂದ್ ಪ್ರಶಸ್ತಿ ವಿಜೇತರಿಗೆ ರೂ. 5 ಲಕ್ಷ ನಗದು ಬಹುಮಾನ ನೀಡಲಾಗುತ್ತದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌