
ಮುಂಬೈ(ಜೂ.26): ಇದು ನಿಜಕ್ಕೂ ಅಪರೂಪದಲ್ಲಿ ಅಪರೂಪರದ ಪ್ರಕರಣ. ವಿಧಾನಸಭೆ ಕಲಾಪದಲ್ಲಿ ಭಾಗಿಯಾಗಲು ರೈಲಿನಲ್ಲಿ ಬರುತ್ತಿದ್ದ ಇಬ್ಬರು ಶಾಸಕರನ್ನು ಕಳ್ಳರು ದೋಚಿದ ಪ್ರಕರಣ ಮಹಾರಾಷ್ಟ್ರದಲ್ಲಿ ನಡೆದಿದೆ.
ವಿದರ್ಭ ಎಕ್ಸಪ್ರೆಸ್ ರೈಲಿನಲ್ಲಿ ಮುಂಬೈನತ್ತ ಪ್ರಯಾಣ ಬೆಳೆಸಿದ್ದ ಚಿಕ್ಲಿಯ ಕಾಂಗ್ರೆಸ್ ಶಾಸಕ ರಾಹುಲ್ ಬೊಂಡ್ರೆ, ಇಲ್ಲಿನ ಕಲ್ಯಾಣ್ ರೈಲು ನಿಲ್ದಾಣದಲ್ಲಿ ಕಳ್ಳನೋರ್ವ ತಮ್ಮ ಪತ್ನಿಯ ಪರ್ಸ್ ಕದ್ದಿದ್ದಾಗಿ ದೂರು ದಾಖಲಿಸಿದ್ದಾರೆ.
ಇದೇ ವೇಳೆ ದೇವಗಿರಿ ಎಕ್ಸಪ್ರೆಸ್ ರೈಲಿನಲ್ಲಿ ಮುಂಬೈನತ್ತ ಪ್ರಯಾಣ ಬೆಳೆಸಿದ್ದ ಮೆಹ್ಕರ್ ಕ್ಷೇತ್ರದ ಶಿವಸೇನಾ ಶಾಸಕ ಸಂಜಯ್ ರೈಮುಲ್ಕರ್, ಜಲ್ನಾ ರೈಲು ನಿಲ್ದಾಣದಲ್ಲಿ ಕಳ್ಳನೋರ್ವ ತಮ್ಮ ಮೊಬೈಲ್ ಫೋನ್ ಮತ್ತು ಸುಮಾರು 13 ಸಾವಿರ ರೂ. ದೋಚಿದ್ದಾಗಿ ದೂರು ದಾಖಲಿಸಿದ್ದಾರೆ.
ಸದ್ಯ ಇಬ್ಬರೂ ಶಾಸಕರ ದೂರನ್ನು ದಾಖಲಿಸಿರುವ ಪೊಲೀಸರು, ಪರಾರಿಯಾಗಿರುವ ಕಳ್ಳರ ಹುಡುಕಾಟದಲ್ಲಿ ನಿರತರಾಗಿದ್ದಾರೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.