
ಪೂಂಛ್, ಜಮ್ಮು ಮತ್ತು ಕಾಶ್ಮೀರ: ಕಾಶ್ಮೀರದ ಪೂಂಛ್ ಸೆಕ್ಟರ್’ನಲ್ಲಿ ಪಾಕಿಸ್ತಾನವು ಕದಮ ವಿರಾಮ ಉಲ್ಲಂಘಿಸಿ ನಡೆಸಿದ ಶೆಲ್ ದಾಳಿಯಲ್ಲಿ ಇಬ್ಬರು ನಾಗರೀಕರು ಮೃಪಟ್ಟಿದ್ದಾರೆ.
ಪೂಂಛ್’ನ ಬಳಿ ಗಡಿ ನಿಯಂತ್ರಣ ರೇಖೆಯ ಬಳಿ ಇಂದು ಬೆಳಗ್ಗಿನ ಜಾವ ಯಾವುದೇ ಪ್ರಚೋದನೆಯಿಲ್ಲದೇ ಪಾಕ್ ಪಡೆಗಳು ಶೆಲ್ ದಾಳಿಯನ್ನು ನಡೆಸಿವೆ. ದಾಳಿಯಲ್ಲಿ ಒಂದೇ ಕುಟುಂಬದ ದಂಪತಿ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ.
ಪಾಕ್ ದಾಳಿಗೆ ಭಾರತೀಯ ಯೋಧರು ಕೂಡಾ ತಕ್ಕ ಉತ್ತರವನ್ನು ನೀಡಿದ್ದಾರೆ. ಇನ್ನೊಂದು ಘಟನೆಯಲ್ಲಿ, ಬಂಡೀಪೋರಾದ ಹಾಜಿನ್ ಪ್ರದೇಶದಲ್ಲಿ ಉಗ್ರರು ನಡೆಸಿದ ದಾಳಿಗೆ ಇಬ್ಬರು ಜವಾನರು ಗಾಯಗೊಂಡಿದ್ದಾರೆ.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.