
ನವದೆಹಲಿ(ಮಾ.04): ಆಗಸ್ಟ್'ವೆಸ್ಟ್'ಲ್ಯಾಂಡ್ ಹೆಲಿಕಾಪ್ಟರ್ ಖರೀದಿ ಹಗರಣದ ಆರೋಪದಡಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ ಸಿಬಿಐ ವಿಶೇಷ ನ್ಯಾಯಾಲಯ ಷರತ್ತಬದ್ದ ಜಾಮೀನು ನೀಡಿದೆ.
ದೆಹಲಿ ಮೂಲದ ಮೀಡಿಯಾ ಎಕ್ಸೀಂ ಪ್ರೈ. ಲಿ ಕಂಪನಿಯ ನಿರ್ದೇಶಕ ಆರ್.ಕೆ ನಂದಾ ಮತ್ತು ಮಾಜಿ ನಿರ್ದೇಶಕ ಜೆ.ಬಿ ಸುಬ್ರಮಣಿಯಂಗೆ ತಲಾ ವೈಯುಕ್ತಿಕ ಒಂದು ಲಕ್ಷ ಬಾಂಡ್ ನೀಡಬೇಕೆನ್ನುವ ಷರತ್ತಿನ ಮೇರೆಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಈ ಮೊದಲು ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದ ಭಾರತೀಯ ವಾಯುಸೇನೆಯ ಮುಖ್ಯಸ್ಥ ಎಸ್.ಪಿ ತ್ಯಾಗಿ, ಅವರ ಸಂಬಂಧಿ ಸಂಜೀವ್ ತ್ಯಾಗಿ ಮತ್ತು ಉಧ್ಯಮಿ ಗೌತಮ್ ಕೆಹತಾನ್ ಅವರಿಗೆ ನ್ಯಾಯಾಲಯ ಜಾಮೀನು ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.