ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಪತ್ರಕರ್ತರ ದುರ್ಮರಣ

Published : Jan 14, 2018, 11:54 AM ISTUpdated : Apr 11, 2018, 12:39 PM IST
ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಪತ್ರಕರ್ತರ ದುರ್ಮರಣ

ಸಾರಾಂಶ

ಎರಡು ಪ್ರತ್ಯೇಕ ಅಪಘಾತ ದುರ್ಘಟನೆಯಲ್ಲಿ ಹಿರಿಯ ಪತ್ರಕರ್ತ ಡಾ. ವೀರೇಶ್ ಹಿರೆಮಠ್(46) ಹಾಗೂ ಸುದ್ದಿ ಟಿವಿ ಶಿರಸಿ ವರದಿಗಾರ ಮೌನೇಶ್ ಪೋತರಾಜ(28) ಮೃತಪಟ್ಟಿದ್ದಾರೆ.

ಬೆಂಗಳೂರು(ಜ.14): ಎರಡು ಪ್ರತ್ಯೇಕ ಅಪಘಾತ ದುರ್ಘಟನೆಯಲ್ಲಿ ಹಿರಿಯ ಪತ್ರಕರ್ತ ಡಾ. ವೀರೇಶ್ ಹಿರೆಮಠ್(46) ಹಾಗೂ ಸುದ್ದಿ ಟಿವಿ ಶಿರಸಿ ವರದಿಗಾರ ಮೌನೇಶ್ ಪೋತರಾಜ(28) ಮೃತಪಟ್ಟಿದ್ದಾರೆ.

ಗೋವಾ ಪ್ರವಾಸ ಮುಗಿಸಿ ಕುಟುಂಬದೊಂದಿಗೆ ಹಿಂದಿರುಗುತ್ತಿದ್ದಾಗ ಕಾರು ಮರಕ್ಕೆ ಗುದ್ದಿದೆ. ಡಾ. ವೀರೇಶ್ ಹಿರೆಮಠ್ ಸಾವನ್ನಪ್ಪಿದ್ದು, ಪತ್ನಿ ಗೌರಿ, ಕಾರು ಚಾಲಕ ಸುನೀಲ್'ಗೆ ಗಂಭೀರ ಗಾಯಗಳಾಗಿದ್ದು ಆಸ್ಫತ್ರೆಗೆ ದಾಖಲಿಸಲಾಗಿದೆ. ಡಾ. ವೀರೇಶ್ ಹಿರೆಮಠ್ ಬಾಗಲಕೋಟೆಯ ಬಿವಿವಿ ಕಾಲೇಜಿನಲ್ಲಿ ಪತ್ರಿಕೋದ್ಯಮ ಅಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಪ್ರಜಾವಾಣಿ, ಸುವರ್ಣ ನ್ಯೂಸ್, ವಿಜಯವಾಣಿ ಹಾಗೂ ವಿಶ್ವವಾಣಿ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ್ದ ಹಿರೆಮಠ್ ಆ ಬಳಿಕ ಅಧ್ಯಾಪಕ ವೃತ್ತಿಗೆ ಮರಳಿದ್ದರು. ಅವರ ಮೃತ ದೇಹವನ್ನು ಧಾರವಾಡದ ಸಿವಿಲ್ ಆಸ್ಫತ್ರೆಯಲ್ಲಿಡಲಾಗಿದೆ. ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಮತ್ತೊಂದು ಅಪಘಾತ ಪ್ರಕರಣದಲ್ಲಿ ಸುದ್ದಿ ಟಿವಿಯ ಶಿರಸಿ ವರದಿಗಾರ ಮೌನೇಶ್ ಪೋತರಾಜ(28) ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಗುಂಡೂರು ಬಳಿ ಈ ಅವಘಡ ಸಂಭವಿಸಿದೆ. ತಡರಾತ್ರಿ ಶಿರಸಿಯಿಂದ ಛಬ್ಬಿ ಗ್ರಾಮಕ್ಕೆ ವಾಪಾಸ್ಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಸ್ಥಳಕ್ಕೆ ಹಾನಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಇಬ್ಬರು ಪತ್ರಕರ್ತರ ಸಾವಿಗೆ ಪತ್ರಕರ್ತರ ಬಳಗ ಸೇರಿದಂತೆ ಅನೇಕ ಮಂದಿ ಕಂಬನಿ ಮಿಡಿದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಉತ್ತರಕನ್ನಡ: ನೀರು ಕೇಳುವ ನೆಪದಲ್ಲಿ ವೃದ್ಧೆಯ ಚಿನ್ನದ ಸರ ಎಗರಿಸಿ ಖದೀಮರು ಎಸ್ಕೇಪ್!
ಬಿಜೆಪಿಯಿಂದ ಟಿಕೆಟ್ ಗಿಟ್ಟಿಸಿಕೊಂಡ ಸೋನಿಯಾ ಗಾಂಧಿಗೆ ಕೇರಳ ಚುನಾವಣೆಯಲ್ಲಿ ಸೋಲು